ಅವಧಿ ಮೀರಿರುವ ತಂಪು ಪಾನೀಯ ಮಾರಾಟ: ಪರಿಶೀಲನೆ

KannadaprabhaNewsNetwork |  
Published : Feb 22, 2024, 01:45 AM ISTUpdated : Feb 22, 2024, 01:46 AM IST
52 | Kannada Prabha

ಸಾರಾಂಶ

ಅಂಗಡಿಯ ಮಾಲೀಕರು ಗ್ರಾಹಕರಿಗೆ ಉತ್ತಮವಾದ ತಂಪು ಪಾನೀಯ ಮತ್ತು ಶುದ್ಧವಾದ ಆಹಾರ ಪದಾರ್ಥಗಳನ್ನು ನೀಡಬೇಕು, ಎಲ್ಲ ತಿಂಡಿ ಪದಾರ್ಥಗಳ ಮೇಲೆ ತಯಾರಿಸಿರುವ ದಿನಾಂಕ ಮತ್ತು ಅವಧಿ ಮೀರುವ ದಿನಾಂಕಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಅವಧಿ ಮೀರಿರುವ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಗ್ರಾಹಕರಿಗೆ ನೀಡಬಾರದು ಹಾಗೂ ಎಲ್ಲ ಹೋಟೆಲ್ ಮತ್ತು ಬೇಕರಿ ಮಾಲೀಕರು ಕಡ್ಡಾಯವಾಗಿ ಆಹಾರ ಪರವಾನಿಗೆ ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ

ಪಟ್ಟಣದ ಗ್ರಾಹಕರೊಬ್ಬರು ಅವಧಿ ಮೀರಿರುವ ತಂಪು ಪಾನೀಯವನ್ನು ಕುಡಿದು ದೂರು ನೀಡಿರುವ ಹಿನ್ನೆಲೆ, ಬುಧವಾರ ತಾಲೂಕಿನ ಆಹಾರ ಸುರಕ್ಷಿತ ಅಧಿಕಾರಿಗಳಾದ ಟಿ. ರವಿಕುಮಾರ್ ಮತ್ತು ತಂಡ ಪಟ್ಟಣದ ಬೇಕರಿಗಳಿಗೆ ಮತ್ತು ಹೋಟೆಲ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಆಹಾರ ಸುರಕ್ಷಿತ ಅಧಿಕಾರಿಗಳು ಬೇಕರಿಯಲ್ಲಿನ ತಿಂಡಿ ಮತ್ತು ತಂಪು ಪಾನೀಯಗಳ ತಯಾರಿಸಿರುವ ದಿನಾಂಕ ಮತ್ತು ಅವಧಿ ಮೀರುವ ದಿನಾಂಕಗಳನ್ನು ಪರಿಶೀಲನೆ ನಡೆಸಿ ಸ್ಥಳ ದಲ್ಲೆ ನೋಟೀಸ್ ನೀಡಿದರು. ಅಂಗಡಿಯ ಮಾಲೀಕರು ಗ್ರಾಹಕರಿಗೆ ಉತ್ತಮವಾದ ತಂಪು ಪಾನೀಯ ಮತ್ತು ಶುದ್ಧವಾದ ಆಹಾರ ಪದಾರ್ಥಗಳನ್ನು ನೀಡಬೇಕು, ಎಲ್ಲ ತಿಂಡಿ ಪದಾರ್ಥಗಳ ಮೇಲೆ ತಯಾರಿಸಿರುವ ದಿನಾಂಕ ಮತ್ತು ಅವಧಿ ಮೀರುವ ದಿನಾಂಕಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಅವಧಿ ಮೀರಿರುವ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಗ್ರಾಹಕರಿಗೆ ನೀಡಬಾರದು ಹಾಗೂ ಎಲ್ಲ ಹೋಟೆಲ್ ಮತ್ತು ಬೇಕರಿ ಮಾಲೀಕರು ಕಡ್ಡಾಯವಾಗಿ ಆಹಾರ ಪರವಾನಿಗೆ ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿದರು. ಕೋಟ್ಪಾ ಕಾಯ್ದೆ ಅಡಿಯಲ್ಲಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದವರಿಗೆ ದಂಡ ವಿಧಿಸಿದರು, ಯಾವುದೇ ಕಾರಣಕ್ಕೂ ತಂಬಾಕು ನಿಷೇಧ ಪ್ರದೇಶದಲ್ಲಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡಬಾರದು ಎಂದು ತಿಳಿಸಿದರು.

ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ರವಿರಾಜ್, ಪ್ರತಾಪ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ