ಕನ್ನಡಪ್ರಭ ವಾರ್ತೆ ಕುಂದಾಪುರ
ಇತ್ತೀಚೆಗೆ ವಯೋನಿವೃತ್ತಿ ಹೊಂದಿದ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಭಾಕರ ಕಾಮತ್ ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಬ್ರಹ್ಮಾವರ ಹೋಬಳಿ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ. ಮಾತನಾಡಿ, ನಿವೃತ್ತ ಕಾಮತ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಶಾಲೆಗೆ ಸಲ್ಲಿಸಿದ ಸೇವೆ ಹಾಗೂ ಇಲಾಖೆಯ ಕಾರ್ಯಕ್ರಮಗಳಿಗೆ ನೀಡಿದ ಸಹಕಾರವನ್ನು ಸ್ಮರಿಸಿದರು.ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಹೊಳ್ಳ ಅವರು, ಶಾಲೆಯ ವಿದ್ಯಾರ್ಥಿಯಾಗಿ ಅಧ್ಯಾಪಕರಾಗಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಸಂಚಾಲಕರಾಗಿ ಸೇವೆ ಸಲ್ಲಿಸಲಿರುವ ನಿವೃತ್ತರನ್ನು ಗೌರವಿಸಿ, ಮುಂದಿನ ದಿನಗಳಲ್ಲಿಯೂ ಶಾಲೆಗಾಗಿ ತಮ್ಮ ಸೇವೆಯನ್ನು ಮೀಸಲಿಡಬೇಕೆಂದು ಕೋರಿದರು.
ಶಾಲಾಭಿವೃದ್ಧಿ ಸಮಿತಿ ಮತ್ತು ಅಧ್ಯಾಪಕರ ವತಿಯಿಂದ ನಿವೃತ್ತರನ್ನು ಗೌರವಿಸಲಾಯಿತು.
ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಾ ಶೇಖರ ಪೂಜಾರಿ ಸದಸ್ಯರಾದ ಸಂಜೀವ ದೇವಾಡಿಗ ಅಚ್ಚುತ ಪೂಜಾರಿ, ಕೆಪಿ ಶೇಖರ್ ಮೊದಲಾದವರು ಇದ್ದರು. ಅಧ್ಯಾಪಕ ಸುಧೀರ್ ಕಾಮತ್ ನಿರೂಪಿಸಿದರು. ಶಿಕ್ಷಕಿ ಗೀತಾ ವಂದಿಸಿದರು.