ಕನ್ನಡಪ್ರಭ ವಾರ್ತೆ ಹ್ಯಾಂಡ್ ಪೋಸ್ಟ್
ಈ ತಂಡವನ್ನು ಕರ್ನಾಟಕ ಮತ್ತು ಕೇರಳ ಗಡಿ ಭಾಗವಾದ ಬಾವಲಿ ಚೆಕ್ ಪೋಸ್ಟ್ ನಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ತಹಸೀಲ್ದಾರ್ ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ತಜ್ಞ ವೈದ್ಯರಾದ ಡಾ. ಶ್ರೀನಿವಾಸ್, ಡಾ. ನಾಗೇಶ್ ರಾವ್, ಡಾ. ಶೇಷಾದ್ರಿ, ಹಿರಿಯ ಔಷಧ ವಿತರಣಾಧಿಕಾರಿ ಉಮೇಶ್ ತಂಡವನ್ನೂ ಕೇರಳ ವಯನಾಡಿಗೆ ಕಳುಹಿಸಿಕೊಟ್ಟರು.
ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು ಮಾತನಾಡಿ, ಜಿಲ್ಲಾ ಆಡಳಿತ ವತಿಯಿಂದ ನುರಿತ ತಜ್ಞರನ್ನು ನಿಯೋಜನೆ ಮಾಡಿ ಕೇರಳ ವಯನಾಡಿಗೆ ಕಳಿಸಿ ಕೊಡುತ್ತಿದ್ದೇವೆ ಹಾಗೂ ನಮ್ಮ ಜಿಲ್ಲೆಯಲ್ಲೂ ಸಹ ಅಗತ್ಯ ಔಷಧಿಗಳೊಂದಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಟಿ. ರವಿಕುಮಾರ್ ಮಾತನಾಡಿ ನುರಿತ ತಜ್ಞ ವೈದ್ಯರನ್ನು ಕೇರಳದ ವಯನಾಡಿಗೆ ಜಿಲ್ಲಾಡಳಿತ ವತಿಯಿಂದ ಕಳಿಸುತ್ತಿದ್ದೇವೆ, ಜೊತೆಗೆ ನಮ್ಮ ತಾಲೂಕಿನ ದೊಡ್ಡ ಬೈರನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು, ನಿಯೋಜನೆ ಮಾಡಿಕೊಂಡಿದ್ದೇವೆ, ಜೊತೆಗೆ ಎಚ್.ಡಿ. ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್ ಗಳನ್ನೂ ಸಿದ್ದಪಡಿಸಿ ಕೊಂಡಿದ್ದೇವೆ ಹಾಗೂ ಮುಂಜಾಗ್ರತೆ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳಲಾಗಿದೆ ಎಂದು ತಿಳಿಸಿದರು.