ಗಣೇಶ್‌ ಪ್ರಭು ನೆಲೆಸಿದ್ದ ಮಾಣಿಯ ಪಾಳುಡೇರೆ ತೆರವು

KannadaprabhaNewsNetwork |  
Published : Feb 17, 2024, 01:22 AM IST
ತಹಶೀಲ್ದಾರ್‌ ಸೂಚನೆಯಂತೆ ಮಾಣಿಯ ಪಾಳುಡೇರೆ ತೆರವು | Kannada Prabha

ಸಾರಾಂಶ

ತಹಸೀಲ್ದಾರ್‌ ಅರ್ಚನಾ ಭಟ್‌ ಅವರ ಸೂಚನೆಯಂತೆ ಶುಕ್ರವಾರ ಗ್ರಾಪಂ ಅಧ್ಯಕ್ಷ ಇಬ್ರಾಹಿಂ ಮಾಣಿ ಅವರ ಮಾರ್ಗದರ್ಶನದಲ್ಲಿ, ಪಿಡಿಒ ಗಿರಿಜಾ ಅವರ ಉಪಸ್ಥಿತಿಯಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಸಾಮಗ್ರಿಗಳನ್ನು ಸಾಗಿಸುವಲ್ಲಿ ನರಸಿಂಹ ಮಾಣಿ ಸಹಕರಿಸಿದರು.

ಬಂಟ್ವಾಳ: ಕಳೆದ ನಾಲ್ಕೈದು ವರ್ಷಗಳಿಂದ ೮೧ ವರ್ಷ ಪ್ರಾಯದ ಗಣೇಶ ಪ್ರಭುಗಳು ಕರುಣಾಜನಕ ಸ್ಥಿತಿಯಲ್ಲಿ ಮಾಸ್ತವ್ಯವಿದ್ದ ಮಾಣಿಯ ಪಾಳು ಡೇರೆಯಲ್ಲಿ ಶುಕ್ರವಾರ ಮಾಣಿ ಗ್ರಾಮ ಪಂಚಾಯಿತಿ ಆಡಳಿತ ತೆರವುಗೊಳಿಸಿದೆ. ಒಂದು ಕಾಲದಲ್ಲಿ ವೆರೈಟಿ ಸಾರಿ ಸದನ್‌ ಮಳಿಗೆ ಮಾಲಕರಾಗಿದ್ದ ಗಣೇಶ ಪ್ರಭುಗಳ ಅತಂತ್ರ ಸ್ಥಿತಿಯ ಬಗ್ಗೆ ಕನ್ನಡಪ್ರಭದಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ತಾಲೂಕು ಆಡಳಿತ ಅವರನ್ನು ಮಂಜೇಶ್ವರ ದೈಗೋಳಿಯ ಸಾಯಿನಿಕೇತನ ಆಶ್ರಮಕ್ಕೆ ಸೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿತ್ತು. ಆಶ್ರಮದ ಡಾ. ಉದಯ ಕುಮಾರ್‌ ಅವರು ಗಣೇಶ್‌ ಪ್ರಭು ಅವರನ್ನು ತಮ್ಮ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದರು.

ತಹಸೀಲ್ದಾರ್‌ ಅರ್ಚನಾ ಭಟ್‌ ಅವರ ಸೂಚನೆಯಂತೆ ಶುಕ್ರವಾರ ಗ್ರಾಪಂ ಅಧ್ಯಕ್ಷ ಇಬ್ರಾಹಿಂ ಮಾಣಿ ಅವರ ಮಾರ್ಗದರ್ಶನದಲ್ಲಿ, ಪಿಡಿಒ ಗಿರಿಜಾ ಅವರ ಉಪಸ್ಥಿತಿಯಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಸಾಮಗ್ರಿಗಳನ್ನು ಸಾಗಿಸುವಲ್ಲಿ ನರಸಿಂಹ ಮಾಣಿ ಸಹಕರಿಸಿದರು.

34 ನೆಕ್ಕಿಲಾಡಿ ಗ್ರಾಪಂ: ವಿರೋಧದ ನಡುವೆಯೇ ಸರ್ಕಾರಿ ಜಾಗ ತೆರವು ಕಾರ್ಯ

ಉಪ್ಪಿನಂಗಡಿ: ೩೪ ನೆಕ್ಕಿಲಾಡಿ ಗ್ರಾ.ಪಂ.ನ ಬೀತಲಪ್ಪು ಎಂಬಲ್ಲಿ ಸರ್ಕಾರಿ ಜಾಗವನ್ನು ಕೆಲವರು ಅತಿಕ್ರಮಿಸಿ ಶೆಡ್ ನಿರ್ಮಿಸಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಶುಕ್ರವಾರ ತೆರವು ಕಾರ್ಯಾಚರಣೆ ನಡೆಸಲಾಯಿತು. ತೆರವು ಕಾರ್ಯಕ್ಕೆ ವಿರೋಧ ವ್ಯಕ್ತವಾದರೂ ಉಪ್ಪಿನಂಗಡಿ ಕಂದಾಯ ಹೋಬಳಿಯ ಕಂದಾಯ ನಿರೀಕ್ಷಕರಾದ ಚಂದ್ರ ನಾಯ್ಕ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.

ತೆರವಿಗೆ ವಿರೋಧ: ಬೀತಲಪ್ಪು ಬಳಿಯ ಸ.ನಂ.೮೪/೩ಎ ಯಲ್ಲಿರುವ ೦.೪೦ ಎಕರೆ ಸರ್ಕಾರಿ ಜಾಗದಲ್ಲಿ ಐದು ಮಂದಿ ಶೆಡ್‌ಗಳನ್ನು ನಿರ್ಮಿಸಿ ಭೂ ಒತ್ತುವರಿಗೆ ಯತ್ನಿಸಿದ ಬಗ್ಗೆ ಕಂದಾಯ ಇಲಾಖಾಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದಾಗ ಸ್ಥಳೀಯ ಕೆಲ ಸಂಘಟನೆಗಳ ಮುಖಂಡರಾದ ರೂಪೇಶ್ ರೈ, ಅನಿ ಮಿನೇಜಸ್ ಮತ್ತಿತರರು ಸ್ಥಳಕ್ಕಾಗಮಿಸಿ ತೆರವು ಕಾರ್ಯಾಚರಣೆಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸ್ಪಷ್ಟನೆ ನೀಡಿದ ಕಂದಾಯ ನಿರೀಕ್ಷಕರು ಕಾನೂನು ಉಲ್ಲಂಘಿಸಿ ಭೂಮಿ ಒತ್ತುವರಿಗೆ ಅವಕಾಶ ನೀಡಲಾಗದು ಎಂದರು.

ಕಾರ್ಯಾಚರಣೆಯಲ್ಲಿ ೩೪ ನೆಕ್ಕಿಲಾಡಿ ಗ್ರಾಮ ಆಡಳಿತಾಧಿಕಾರಿ ಜಂಗಪ್ಪ, ತಾಲೂಕು ಭೂಮಾಪಕರಾದ ಮೋಹನ್, ಗ್ರಾಮ ಸಹಾಯಕರಾದ ದಿವಾಕರ, ಯತೀಶ, ೩೪ ನೆಕ್ಕಿಲಾಡಿ ಗ್ರಾ.ಪಂ. ಸಿಬ್ಬಂದಿ ನಿತಿನ್ ಭಾಗವಹಿಸಿದರು. ಉಪ್ಪಿನಂಗಡಿ ಪೊಲೀಸರು ಬಂದೋಬಸ್ತ್‌ ಕಲ್ಪಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರೇಟರ್‌ ಬೆಂಗಳೂರು ಪಾಲಿಕೆಯ ಐದೂ ನಗರ ಪಾಲಿಕೆಗಳ ಆಯವ್ಯಯ ಮಂಡನೆ
ರಸ್ತೆ, ಮೂಲಸೌಕರ್‍ಯಕ್ಕೆ ಭರ್ಜರಿ ಉತ್ತರ - ಪಶ್ಚಿಮ ಪಾಲಿಕೆಯದ್ದೇ ದೊಡ್ಡ ಮೊತ್ತದ ಬಜೆಟ್