ಮೊದಲ ದಿನವೇ ಮಕ್ಕಳ ಕೈಗೆ ಪಠ್ಯಪುಸ್ತಕ

KannadaprabhaNewsNetwork |  
Published : May 29, 2025, 12:06 AM IST
ಪೋಟೊ28ಕೆಎಸಟಿ2: ಕುಷ್ಟಗಿ ತಾಲೂಕಿನ ಶಾಲೆಯ ಮುಖ್ಯಸ್ಥರಿಗೆ ಪುಸ್ತಕ ನೋಡಲ್ ಅಧಿಕಾರಿ ಇಸಿಒ ಶಿವಾನಂದ ಪಂಪಣ್ಣವರು ಪಠ್ಯಪುಸ್ತಕಗಳನ್ನು ವಿತರಣೆ ಮಾಡಿದರು.28ಕೆಎಸಟಿ2ಎ: ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊರನೋಟ. | Kannada Prabha

ಸಾರಾಂಶ

ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇರುವ 333 ಶಾಲೆಗಳು ಇಂದು ಪುನರಾರಂಭಗೊಳ್ಳಲಿದ್ದು ಶಾಲೆಗೆ ಆಗಮಿಸುವ ಮಕ್ಕಳಿಗೆ ಪಠ್ಯಪುಸ್ತಕ ಸೇರಿದಂತೆ ಇತರೆ ಸೌಲಭ್ಯವನ್ನು ಶಾಲೆ ಆರಂಭದಲ್ಲೇ ದೊರಕಿಸಲು ಸಿದ್ಧತೆ ಮಾಡಿಕೊಂಡಿದೆ.

ಪರಶಿವಮೂರ್ತಿ ದೋಟಿಹಾಳ

ಕುಷ್ಟಗಿ:

ಒಂದೂವರೆ ತಿಂಗಳು ರಜೆಯ ಮೂಡ್‌ನಲ್ಲಿದ್ದ ಶಾಲಾ ಮಕ್ಕಳನ್ನು ಶೈಕ್ಷಣಿಕ ವರ್ಷಾರಂಭಕ್ಕೆ ಸ್ವಾಗತಿಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ.

ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇರುವ 333 ಶಾಲೆಗಳು ಇಂದು ಪುನರಾರಂಭಗೊಳ್ಳಲಿದ್ದು ಶಾಲೆಗೆ ಆಗಮಿಸುವ ಮಕ್ಕಳಿಗೆ ಪಠ್ಯಪುಸ್ತಕ ಸೇರಿದಂತೆ ಇತರೆ ಸೌಲಭ್ಯವನ್ನು ಶಾಲೆ ಆರಂಭದಲ್ಲೇ ದೊರಕಿಸಲು ಸಿದ್ಧತೆ ಮಾಡಿಕೊಂಡಿದೆ. ಶಾಲಾ ಶಿಕ್ಷಣ ಇಲಾಖೆ ಆದೇಶದಂತೆ ಬುಧವಾರ ಶಿಕ್ಷಕರು ಮತ್ತು ಸಿಬ್ಬಂದಿ ಸೇವೆಗೆ ಹಾಜರಾಗಿ, ಶಾಲಾ ಸ್ವಚ್ಛತೆಯಿಂದ ಹಿಡಿದು ಶಾಲಾ ಪ್ರಾರಂಭೋತ್ಸವದ ವರೆಗಿನ ತಯಾರಿ ಮಾಡಿಕೊಂಡರು.

ದಾಖಲಾತಿ ಆಂದೋಲನ:

ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು ಎಂದು ಇಲಾಖೆಯು ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕುರಿತು ಜಾಗೃತಿ ಕಾರ್ಯಕ್ರಮ, ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ 1ನೇ ತರಗತಿಗೆ ದಾಖಲಾತಿ ಮಾಡಿಸಲು ಶಿಕ್ಷಕರು ಮನೆ ಮನೆಗೆ ತೆರಳಿ ಪಾಲಕರಿಗೆ ಸೌಲಭ್ಯಗಳ ಕುರಿತು ಮನವರಿಕೆ ಮಾಡಿಕೊಡುತ್ತಿದ್ದಾರೆ. ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಮಾಡುವ ಮೂಲಕ ಹೆಚ್ಚಿನ ಮಕ್ಕಳು ತರಗತಿಗೆ ಹಾಜರಾಗುವಂತೆ ಮುಖ್ಯ ಶಿಕ್ಷಕರು ಹಾಗೂ ಸಿಆರ್‌ಪಿ, ಬಿಆರ್‌ಪಿಗಳಿಗೆ ಸಭೆ ಮೂಲಕ ಮಾರ್ಗದರ್ಶನ ನೀಡಲಾಗಿದೆ.

ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿ, ಸಿಹಿ ವಿತರಿಸುವ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಕೇಸರೂ ಶಾಲೆಯ ಮುಖ್ಯಶಿಕ್ಷಕ ವಸಂತ ಮಾಳಗಿ ತಿಳಿಸಿದ್ದಾರೆ.

ಪಠ್ಯಪುಸ್ತಕ ಪೂರೈಕೆ:

ತಾಲೂಕಿನಲ್ಲಿ 1ರಿಂದ 10ನೇ ತರಗತಿ ಮಕ್ಕಳಿಗೆ 8,31,969 ಪಠ್ಯ-ಪುಸ್ತಕಗಳ ಬೇಡಿಕೆಯಿದ್ದು 5,61,100 ಸರಬರಾಜಾಗಿದೆ. ಉಳಿದ ಪುಸ್ತಕಗಳು ಶೀಘ್ರದಲ್ಲಿಯೇ ಬರಲಿವೆ. ಬಂದಿರುವ ಪುಸ್ತಕಗಳನ್ನು ಆಯಾ ಶಾಲೆಗೆ ವಿತರಿಸಲಾಗಿದೆ ಎಂದು ಪಠ್ಯಪುಸ್ತಕದ ನೋಡಲ್ ಅಧಿಕಾರಿ ಇಸಿಒ ಶಿವಾನಂದ ಪಂಪಣ್ಣವರು ತಿಳಿಸಿದ್ದಾರೆ.ಜಿಲ್ಲೆಯ ತಾಲೂಕಿನ ಶಾಲೆಗಳಿಗೆ ಹಂತ-ಹಂತವಾಗಿ ಸಮವಸ್ತ್ರ ವಿತರಿಸುವ ಕಾರ್ಯ ನಡೆಯುತ್ತಿದ್ದು ಎರಡ್ಮೂರು ದಿನಗಳಲ್ಲಿ ಕುಷ್ಟಗಿ ತಾಲೂಕಿಗೆ ಬರಲಿವೆ. ಬಳಿಕ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು.

ಇಸಿಪಿ ರಾಘಪ್ಪ ಸಮವಸ್ತ್ರ ನೋಡಲ್ ಅಧಿಕಾರಿಶಾಲಾ ಆರಂಭದ ದಿನವಾದ ಬುಧವಾರ ಮಕ್ಕಳಿ ಸಿಹಿಯೂಟ, ಪಠ್ಯಪುಸ್ತಕ ವಿತರಿಸುವುದು ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲು ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ.

ಸುರೇಂದ್ರ ಕಾಂಬಳೆ ಬಿಇಒ ಕುಷ್ಟಗಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ