ಯಾರ ಕೈವಾಡವಿದೆ ಎಂಬ ಬಗ್ಗೆ ಸಮಗ್ರ ತನಿಖೆ ಅಗತ್ಯ: ಸರ್ಕಾರಕ್ಕೆ ಉಮೇಶ್ ಒತ್ತಾಯ

KannadaprabhaNewsNetwork |  
Published : Jun 18, 2024, 12:53 AM IST
51 | Kannada Prabha

ಸಾರಾಂಶ

ಕಾಮುಕನಿಂದ ಪ.ಪಂಗಡದ ಕುಟುಂಬಕ್ಕೆ ತೀವ್ರ ಅನ್ಯಾಯವಾದರೂ ಈ ಬಗ್ಗೆ ಕ್ರಮ ಕೈಗೊಳ್ಳದೆ ಕೇಸು ಮುಚ್ಚಿ ಹಾಕುವ ಮುನ್ನಾರ ನಡೆದಿತ್ತು, ಆದರೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರು ಸಕಾಲದಲ್ಲಿ ಮಧ್ಯ ಪ್ರವೇಶ ಮಾಡಿದ್ದರಿಂದ ನೊಂದ ಕುಟುಂಬಕ್ಕೆ ನ್ಯಾಯ ದೊರೆತು,

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಆತ್ಮಹತ್ಯೆಗೆ ಯತ್ನಿಸಿದ ಚಂದಗಾಲು ಗ್ರಾಮದ ಮಹದೇವನಾಯಕನ ಕುಟುಂಬದವರು ದೂರು ನೀಡಲು ಮುಂದಾದಾಗ ಪೊಲೀಸರು ಅದನ್ನು ಪಡೆಯದಿರುವುದರ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಪುರಸಭೆ ಸದಸ್ಯ ಉಮೇಶ್ ಒತ್ತಾಯಿಸಿದರು.

ಕಾಮುಕನಿಂದ ಪ.ಪಂಗಡದ ಕುಟುಂಬಕ್ಕೆ ತೀವ್ರ ಅನ್ಯಾಯವಾದರೂ ಈ ಬಗ್ಗೆ ಕ್ರಮ ಕೈಗೊಳ್ಳದೆ ಕೇಸು ಮುಚ್ಚಿ ಹಾಕುವ ಮುನ್ನಾರ ನಡೆದಿತ್ತು, ಆದರೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರು ಸಕಾಲದಲ್ಲಿ ಮಧ್ಯ ಪ್ರವೇಶ ಮಾಡಿದ್ದರಿಂದ ನೊಂದ ಕುಟುಂಬಕ್ಕೆ ನ್ಯಾಯ ದೊರೆತು, ಸರ್ಕಾರದಿಂದ ಪರಿಹಾರ ಬಂದಿತು ಎಂದು ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಪೊಲೀಸರಿಂದ ಸೂಕ್ತ ರಕ್ಷಣೆ ದೊರಕದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿ ಮಹದೇವನಾಯಕ ಮೃತಪಟ್ಟ ನಂತರ ರಾಜಿ ಕಬೂಲಿ ಮಾಡಿ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಷಡ್ಯಂತ್ರ ನಡೆದಿತ್ತು. ಆದರೆ ಈ ವಿಚಾರ ತಿಳಿದ ಮಾಜಿ ಸಚಿವರು ಮುಂದೆ ನಿಂತು ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಿದ್ದಾರೆಂದು ತಿಳಿಸಿದರು.

ಪುರಸಭೆ ಸದಸ್ಯ ನಟರಾಜು ಹೇಳಿಕೆ ನೀಡಿ, ಮಾಜಿ ಸಚಿವರು ಅಧಿಕಾರಿಗಳನ್ನು ಹೆದರಿಸಿ ಬೆದರಿಸಿ ಕುಟುಂಬಕ್ಕೆ ಚೆಕ್ ಕೊಡಿಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ಶಾಸಕ ಡಿ. ರವಿಶಂಕರ್ ಅವರು ಈ ಕೆಲಸ ಮಾಡಿದ್ದರೆ ನಮ್ಮ ನಾಯಕರು ದೆಹಲಿಯಿಂದ ಬಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬದ ಪರವಾಗಿ ನಿಲ್ಲಬೇಕಿತ್ತೆ? ಎಂದು ಪ್ರಶ್ನಿಸಿದರು.

ಕಳೆದ 13 ತಿಂಗಳಿನಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯದೇ ಜನರಿಗೆ ತೊಂದರೆಯಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಅಗತ್ಯ ಅನುದಾನ ತರುವಲ್ಲಿ ಶಾಸಕರು ವಿಫಲರಾಗಿದ್ದು, ಮುಂದಾದರೂ ಅವರು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್ ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ನಾವು ಅದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ ಅವರು, ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಮತದಾರರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪುರಸಭೆ ಸದಸ್ಯ ತೋಂಟದಾರ್ಯ, ಮಾಜಿ ಸದಸ್ಯ ಮಂಜುನಾಥ್, ನಗರ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರುದ್ರೇಶ್, ಚಂದಗಾಲು ಗ್ರಾಪಂ ಸದಸ್ಯ ಪಿ. ಮಹದೇವ್, ಜೆಡಿಎಸ್ ಮುಖಂಡರಾದ ರಾಘವೇಂದ್ರ, ಚಿಕ್ಕವೀರು ಇದ್ದರು.

---------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ