ಕನ್ನಡಪ್ರಭ ವಾರ್ತೆ ನಾಪೋಕ್ಲು
ಸಂಸದರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ ಅವರು, ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ನಾಪೋಕ್ಲು ಭಗವತಿ ಸನ್ನಿಧಿಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದರು.
ಚುನಾವಣಾ ಪ್ರಚಾರ ಆರಂಭಿಸಿದ ತಲಕಾವೇರಿಯಲ್ಲಿ ಇಂದು ಕೂಡಾ ಪೂಜೆ ಸಲ್ಲಿಸಿ ಸಭೆ ನಡೆಸಿದ್ದು, ಕಾವೇರಿಯ ಆಶೀರ್ವಾದಿಂದಲೇ ಅಧಿಕಾರ ಸಿಕ್ಕಿದೆ ಎಂದು ಯದುವೀರ್ ಅಭಿಪ್ರಾಯಪಟ್ಟರು.ಚುನಾವಣೆ ಸಂದರ್ಭ ಯಾವ ರೀತಿ ಶ್ರಮ ಹಾಕಿದ್ದೆವೋ ಅದೇ ರೀತಿ ಮುಂದಿನ ಐದು ವರ್ಷಗಳಲ್ಲೂ ಕೆಲಸ ಮಾಡುವುದಾಗಿ ಹೇಳಿದ ಅವರು, ಆದಷ್ಟು ಬೇಗ ಪ್ರಗತಿ ಪರೀಶೀಲನಾ ಸಭೆ ನಡೆಸಿ, ಉಳಿದಿರುವ ಕೆಲಸ ಕಾರ್ಯಗಳತ್ತ ಗಮನ ಹರಿಸುವುದಾಗಿ ಭರವಸೆ ನೀಡಿದರು.
ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಎಂಎಲ್ಸಿ ಮಂಡೆಪಂಡ ಸುಜಾ ಕುಶಾಲಪ್ಪ, ಮಾಜಿ ಶಾಸಕ, ಮಾಜಿ ವಿಧಾನಸಭಾ ಸ್ಪೀಕರ್ ಕೆ ಜಿ ಬೋಪಯ್ಯ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರೀನಾ ಪ್ರಕಾಶ್, ರಾಜ್ಯ ರೈತ ಮೋರ್ಚಾ ಕಾರ್ಯಕಾರಿ ಸಮಿತಿಯ ಯಮುನಾ ಚಂಗಪ್ಪ, ಆಫ್ಕಾಂ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ನಾಗೇಶ್ ಕುಂದಲ್ ಪಾಡಿ, ಮಾಜಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಲ್ಲಿರ ಚಲನ್, ರಾಜ್ಯ ಕಾರ್ಯಕಾರಿ ಸಮಿತಿಯ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಮಡಿಕೇರಿ ನಗರ ಅಧ್ಯಕ್ಷ ಉಮೇಶ್ ಸುಬ್ರಮಣಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ, ಮಡಿಕೇರಿ ತಾಲೂಕು ಓಬಿಸಿ ಪ್ರತೀಪ ಸೇರಿದಂತೆ ಪಕ್ಷದ ಜಿಲ್ಲೆ, ತಾಲೂಕು , ಬೂತ್ ಮಟ್ಟದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಮಡಿಕೇರಿ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಶಿವಚಾಳಿಯಂಡ ಜಗದೀಶ್ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.