ಕನ್ನಡಪ್ರಭ ವಾರ್ತೆ, ಬೆಂಗಳೂರು
ಮೈಸೂರು ಟಿ. ನರಸೀಪುರ ತಾಲೂಕಿನ ಮೂಗೂರು ಮತ್ತು ಇತರೆ 43 ಜನವಸತಿ ಪ್ರದೇಶ,ಮೈಸೂರು ತಾಲೂಕು ಉಂಡವಾಡಿ ಮತ್ತು ಇತರೆ 67 ಜನವಸತಿ ಪ್ರದೇಶ,ಕಲಬುರಗಿ ಜಿಲ್ಲೆಯ ಆಳಂದ ಹಾಗೂ ಕಮಲಾಪುರ ತಾಲೂಕುಗಳಲ್ಲಿ ವಿ.ಕೆ. ಸಲಗಾರ್ ಮತ್ತು ಇತರೆ 16 ಗ್ರಾಮ,ಜೇವರ್ಗಿ ತಾಲೂಕಿನ 22 ಗ್ರಾಮ,ಬೀದರ್ ತಾಲೂಕಿನ ಬಗ್ದಾಲ್ ಮತ್ತು ಇತರೆ 136 ಜನವಸತಿ ಪ್ರದೇಶ ಹಾಗೂ ರಾಣೆಬೆನ್ನೂರು ತಾಲೂಕಿನಲ್ಲಿ 100 ಕೋಟಿ ರು.ಗಳ ವೆಚ್ಚದಲ್ಲಿ 27 ಗ್ರಾಮಗಳಿಗೆ ಕುಡಿಯುವ ನೀರೊದಗಿಸಲು ಒಪ್ಪಿಗೆ ನೀಡಿದೆ.
ರಾಜ್ಯದ ಆರು ಕೇಂದ್ರ ಕಾರಾಗೃಹಗಳು ಮತ್ತು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ಉಪಕರಣಗಳ ಮೇಲ್ದರ್ಜೆಗೇರಿಸುವುದು ಹಾಗೂ ಮೂರು ವರ್ಷಗಳ ಕಾಲ ನಿರ್ವಹಣೆಯನ್ನು 43.75 ಕೋಟಿ ರು.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಒಪ್ಪಿಗೆ ನೀಡಲಾಗಿದೆ. ಕರ್ನಾಟಕ ಅನಿಮೇಷನ್, ವಿಷಯಲ್ ಎಫೆಕ್ಟ್, ಗೇಮಿಂಗ್ ಕಾಮಿಕ್ಸ್ ಮತ್ತು ಎಕ್ಸೆಂಟೆಡ್ ರಿಯಾಲಿಟಿ (ಎವಿಜಿಸಿ-ಎಕ್ಸ್ಆರ್) ನೀತಿ 3.0 (2024-2029)ಗೆ ಅನುಮೋದನೆ ನೀಡಲಾಗಿದ್ದು ಮುಂದಿನ 5 ವರ್ಷದಲ್ಲಿ 150 ಕೋಟಿ ರು. ವಿನಿಯೋಗಿಸಲು ನಿರ್ಧರಿಸಲಾಗಿದೆ. ಬಾಕ್ಸ್...ಎಸ್ಸಿ/ಎಸ್ಟಿಗಳಿಗೆ ಪೌರಕಾರ್ಮಿಕ ಹುದ್ದೆ
ಇತರೆ ಸಂಪುಟ ತೀರ್ಮಾನ
*ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಸೇರಿದ 136 ಮೆಟ್ರಿಕ್ ಪೂರ್ವ, 134 ಮೆಟ್ರಿಕ್ ನಂತರದ, 119 ವಾಲ್ಮೀಕಿ ಆಶ್ರಮ ಶಾಲೆಗಳಿಗೆ 69.13 ಕೋಟಿ ರೂ. ಮೊತ್ತದಲ್ಲಿ ಆಹಾರ ಪದಾರ್ಥ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಆಹ್ವಾನಿಸಿ ಖರೀದಿಸಲು ಸಮ್ಮತಿ.