ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ

KannadaprabhaNewsNetwork |  
Published : Sep 06, 2026, 02:15 AM IST
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಹಟ್ಟಿಯಿಂದ ನವಲಗುಂದದ ವರೆಗೆ ರೈತರು ಪಾದಯಾತ್ರೆ ಹಮ್ಮಿಕೊಂಡು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಹುಬ್ಬಳ್ಳಿ, ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕುಗಳನ್ನು ಶೀಘ್ರವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು.

ಬ್ಯಾಹಟ್ಟಿ:

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ ನೇತೃತ್ವದಲ್ಲಿ ಬ್ಯಾಹಟ್ಟಿಯಿಂದ ನವಲಗುಂದ ರೈತ ಭವನದ ವರೆಗೆ ಪಾದಯಾತ್ರೆ ನಡೆಸಿ, ತಹಸೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಶುಕ್ರವಾರ ಬ್ಯಾಹಟ್ಟಿಯಿಂದ ಹೆಬಸೂರು, ಕರ್ಲವಾಡ ಮಾರ್ಗವಾಗಿ ಯಮನೂರಿಗೆ ತೆರಳಿ ವಾಸ್ತವ್ಯ ಹೂಡಿದ್ದ ರೈತರು, ಬಳಿಕ ಶನಿವಾರ ಪಾದಯಾತ್ರೆ ಮುಂದುವರಿಸಿ ನವಲಗುಂದ ತಲುಪಿದರು. ರೈತರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿ, ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕುಗಳನ್ನು ಶೀಘ್ರವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು. ಬಾಕಿ ಇರುವ ಬೆಳೆ ವಿಮೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರೈತರ ಬೆಳೆ ಸಾಲ ಹಾಗೂ ಟ್ರ್ಯಾಕ್ಟರ್ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಸರ್ಕಾರದ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ 2025-26ನೇ ಸಾಲಿನ ಬಾಕಿ ಇರುವ 95 ರೈತರಿಗೆ ಸೇರಬೇಕಾದ ಸುಮಾರು ₹87 ಲಕ್ಷ ಕೂಡಲೇ ರೈತರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು. ಇದರೊಂದಿಗೆ ಜಾನುವಾರುಗಳಿಗೆ ಅಗತ್ಯ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

ಈ ವೇಳೆ ಶಂಕ್ರಪ್ಪ ಅಂಬಲಿ, ಮುದಕಣ್ಣ ಕಂಕೊಳ್ಳಿ, ಸಿದ್ದಣ್ಣ ತೇಜಿ, ಹನಮಂತಯ್ಯ ಕಂಬಳಿ, ರಾಜು ಕರಮಡಿ, ಮಂಜು ಮಲ್ಲಾರಿ, ಚನ್ನಪ್ಪ ಕಣ್ಣೂರು ಸೇರಿದಂತೆ ಬ್ಯಾಹಟ್ಟಿ, ಸುಳ್ಳ, ಹೆಬಸೂರು, ಕರ್ಲವಾಡ, ಕಾಲವಾಡ, ಕುರಹಟ್ಟಿ ಹಾಗೂ ಯಮನೂರು ಗ್ರಾಮದ ರೈತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಕೆಲಸಗಳಿಗೆ ಅಲೆದಾಟ ತಪ್ಪಲಿದೆ
ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಗಣನೀಯ ಪ್ರಗತಿ