ಕನ್ನಡಪ್ರಭ ವಾರ್ತೆ ಸೊರಬ
ಭಾನುವಾರ ಪಟ್ಟಣದ ಹೊಸಪೇಟೆ ಬಡಾವಣೆ ಜೀವಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಚುಂಚಾದ್ರಿ ಮಹಿಳಾ ವೇದಿಕೆ ಆಯೋಜಿಸಿದ್ದ 2ನೇ ವರ್ಷದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಆರೋಗ್ಯ ತರಬೇತಿ ಮತ್ತು ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರನ್ನು ಗೌರವಿಸುವ ಸಮಾಜಗಳು ಬಹುಬೇಗ ಪ್ರಗತಿ ಪಥದತ್ತ ಸಾಗುತ್ತವೆ. ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಬೇಕು. ಗ್ರಾಮೀಣ ಮಹಿಳೆಯರ ಶೈಕ್ಷಣಿಕ ಪ್ರಗತಿ ಮತ್ತು ಸಂಘಟನೆ ಚುಂಚಾದ್ರಿ ಮಹಿಳಾ ವೇದಿಕೆಯ ಧ್ಯೇಯ ಎಂದರು.ಶಿಕಾರಿಪುರದ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆ ಶುಶ್ರೂಷಾಧಿಕಾರಿ ಆರ್.ಮಾನಸ ಅವರು "ಆರೋಗ್ಯದ ಅರಿವು " ವಿಷಯ ಕುರಿತು ಉಪನ್ಯಾಸ ನೀಡಿ, ಮಹಿಳೆಯರ ಆರೋಗ್ಯ ಸಂರಕ್ಷಣೆಯಲ್ಲಿ ಹಿಂಜರಿಕೆ ಸಲ್ಲದು. ಮಹಿಳೆಯರು ವೈಜ್ಞಾನಿಕ ದೃಷ್ಟಿಕೋನದಲ್ಲಿ ಜೀವಿಸಬೇಕು. ಮಡಿ ಮೈಲಿಗೆ ಪರಿಕಲ್ಪನೆಯನ್ನು ತೊರೆದು ಶುಚಿತ್ವಕ್ಕೆ ಮಹತ್ವ ನೀಡಬೇಕು. ಅನಾರೋಗ್ಯಕ್ಕೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಸಾಗರ ತಾಲೂಕು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಭಾಗೀರಥಿ ಕೆರೆಕೊಪ್ಪ ಮಾತನಾಡಿ, ಅಸಂಘಟಿತ ಗ್ರಾಮೀಣ ಮಹಿಳೆಯರನ್ನು ಸಂಘಟಿಸುವಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದರು.
ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಡಾ. ಪವಿತ್ರ ಸುನೀಲ್ ಮಾತನಾಡಿದರು. ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಉಮೇಶ್ ಭದ್ರಾಪುರ ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ನೀಡಿದರು.ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಪೂರ್ವದಲ್ಲಿ ಮಹಿಳೆಯರಿಗೆ ರಂಗೋಲಿ, ಜನಪದಗೀತೆ, ಜನಪದ ನೃತ್ಯ ಮತ್ತು ಪಾಸಿಂಗ್ ಬಾಲ್ ಸ್ಪರ್ಧೆಗಳು ನಡೆದವು.
ಶಿವಮೊಗ್ಗ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಡಾ. ನೇತ್ರಾವತಿ ಗೌಡ, ಸೊರಬ ತಾಲೂಕು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಉಮಾಕಾಂತ್ ಗೌಡ ನೆಲ್ಲೂರು, ಕೃಷ್ಣಪ್ಪ ಕಾರೆಹೊಂಡ, ವಿಜಯ ವಿನಾಯಕ ಶೇಟ್ ಶಿರಸಿ, ಜ್ಯೋತಿ ಉಮಾಕಾಂತ, ಸುಲೋಚನಾ ಸುಬ್ರಾಯ, ಸವಿತ ಕೃಷ್ಣ, ಅಶ್ವಿನಿ ಹೊಸಕೊಪ್ಪ, ಮಮತಾ ಭೈರಪ್ಪ ನಿಸರಾಣಿ, ಗೋದಾವರಿ ಹೊಸಕೊಪ್ಪ, ಗೋದಾವರಿ ಗಣಪತಪ್ಪ, ಸುಮಲತಾ ವಿನಾಯಕ, ಅನುಪಮಾ ಉಮೇಶ್, ಚೇತನ ರಮೇಶ್, ಸಾವಿತ್ರಮ್ಮ ಬೀರಪ್ಪ, ಏಕಾಂಬರಿ, ಪ್ರೇಮ ಮಂಜಪ್ಪ, ವೀಣಾ ನಾಯ್ಕ್, ನೇತ್ರಾ ಉಮೇಶ್, ರಾಮಪ್ಪ ಹುಲೇಮರಡಿ, ಲೀಲಮ್ಮ ಭಾಸ್ಕರ, ಹೇಮಂತರಾಜ, ಕವನಾ ಉಪಸ್ಥಿತರಿದ್ದರು.- - -
ಕೋಟ್ರೈತ ಮಹಿಳೆಯರು ಕೃಷಿ ಜೊತೆಯಲ್ಲಿ ಕೈಕಸುಬುಗಳನ್ನು ಮಾಡಬಹುದು. ಇದರಿಂದ ಆರ್ಥಿಕ ಸ್ವಾವಲಂಬನೆ ಹೊಂದಬಹುದು. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡುವ ಮೂಲಕ ಹೊರಪ್ರಪಂಚದ ಅರಿವು ಹೊಂದಬೇಕು ಎಂದ ಅವರು, ಮಹಿಳೆಯರ ಪ್ರತಿಭೆಯನ್ನು ಪುರಸ್ಕರಿಸಿ ಗೌರವಿಸುವುದು ವೇದಿಕೆ ಉದ್ದೇಶ- ರಾಧಾ ಉಮೇಶ್, ಅಧ್ಯಕ್ಷೆ
- - --೧೯ಕೆಪಿಸೊರಬ೦೨:
ಸಮಾರಂಭವನ್ನು ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘ ಅಧ್ಯಕ್ಷೆ ಭಾರತಿ ರಾಮಕೃಷ್ಣ ಉದ್ಘಾಟಿಸಿದರು.