ಪ್ರಚಾರವಿಲ್ಲದೆ ಕೃಷಿಯಲ್ಲಿ ಸಾಧನೆ ಮಾಡಿದ ಮಹಿಳೆ ರಜನಿ: ಆದರ್ಶ ಬಿ ಗೌಡ

KannadaprabhaNewsNetwork |  
Published : Dec 26, 2025, 02:01 AM IST
ನರಸಿಂಹರಾಜಪುರ ಜ್ವಾಲಾಮಾಲಿನಿ ಜೇಸಿ ಸಂಸ್ಥೆ ವತಿಯಿಂದ ಲಿಂಗಾಪುರ ಗ್ರಾಮದ ಕೃಷಿಕ ಮಹಿಳೆ ಎಂ.ಎಸ್.ರಜನಿ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಆದರ್ಶ ಬಿ ಗೌಡ ಮತ್ತಿತರರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರಲಿಂಗಾಪುರ ಗ್ರಾಮದ ಎಂ.ಎಸ್.ರಜನಿ ಎಂಬ ಮಹಿಳೆ ಏಕಾಂಗಿಯಾಗಿ ಹೆಚ್ಚು ಪ್ರಚಾರವಿಲ್ಲದೆ ಕೋಳಿ ಫಾರಂ, ತೋಟ ನಿರ್ಮಿಸಿ ಕೃಷಿ ಸಾಧನೆ ಮಾಡಿದ್ದು ಅವರನ್ನು ಜೇಸಿ ಸಂಸ್ಥೆಯಿಂದ ಸನ್ಮಾನಿಸಲಾಗುತ್ತಿದೆ ಎಂದು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಆದರ್ಶ ಬಿ. ಗೌಡ ತಿಳಿಸಿದರು.

ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿ ಸನ್ಮಾನ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಲಿಂಗಾಪುರ ಗ್ರಾಮದ ಎಂ.ಎಸ್.ರಜನಿ ಎಂಬ ಮಹಿಳೆ ಏಕಾಂಗಿಯಾಗಿ ಹೆಚ್ಚು ಪ್ರಚಾರವಿಲ್ಲದೆ ಕೋಳಿ ಫಾರಂ, ತೋಟ ನಿರ್ಮಿಸಿ ಕೃಷಿ ಸಾಧನೆ ಮಾಡಿದ್ದು ಅವರನ್ನು ಜೇಸಿ ಸಂಸ್ಥೆಯಿಂದ ಸನ್ಮಾನಿಸಲಾಗುತ್ತಿದೆ ಎಂದು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಆದರ್ಶ ಬಿ. ಗೌಡ ತಿಳಿಸಿದರು.

ಮಂಗಳವಾರ ಲಿಂಗಾಪುರ ಗ್ರಾಮಕ್ಕೆ ತೆರಳಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯಿಂದ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿ ಪ್ರಗತಿ ಪರ ಕೃಷಿಕ ಮಹಿಳೆ ಎಂ.ಎಸ್.ರಜನಿ ಅವರನ್ನು ಸನ್ಮಾನಿಸಿ ಮಾತನಾಡಿದರು. ರಜನಿ ಅವರು 10 ಸಾವಿರ ಕೋಳಿ ಮರಿಗಳನ್ನು ಸಾಕಿದ್ದಾರೆ. ತಮ್ಮ ತೋಟಗಳಿಗೆ ಸಾವಯವ ಗೊಬ್ಬರ ಬಳಸಿ ಉತ್ತಮ ಬೆಳೆ ಬೆಳೆಯುತ್ತಿದ್ದಾರೆ. ಅವರ ಸಾಧನೆಯನ್ನು ಜೇಸಿ ಸಂಸ್ಥೆ ಗುರುತಿಸಿ ಸನ್ಮಾನಿಸುತ್ತಿದೆ ಎಂದರು.

ಜೇಸಿ ಸಂಸ್ಥೆ ಪೂರ್ವಾಧ್ಯಕ್ಷ ಅಭಿನವ ಗಿರಿರಾಜ್ ಮಾತನಾಡಿ, ಗ್ರಾಮೀಣ ಪ್ರದೇಶದ ಮಹಿಳೆ ಸಾಧನೆಯನ್ನು ಜೇಸಿ ಸಂಸ್ಥೆ ಗುರುತಿಸಿದೆ. ಅವರು ತಮ್ಮ ಜಮೀನಿನಲ್ಲಿ ಮಿಶ್ರ ಬೆಳೆ ಬೆಳೆದು ಆರ್ಥಿಕವಾಗಿ ಲಾಭ ಪಡೆದಿದ್ದಾರೆ ಎಂದರು. ಜೇಸಿ ನಿರ್ದೇಶಕ ಹೊನ್ನೇಕೊಡಿಗೆ ಎಲ್ದೋ ಮಾತನಾಡಿ, ಲಿಂಗಾಪುರದ ಕೃಷಿಕ ಮಹಿಳೆ ಎಂ.ಎಸ್.ರಜನಿ ಸ್ವಾವಲಂಭಿಯಾಗಿ ಹೇಗೆ ಬದುಕಬಹುದು ಎಂಬುದನ್ನು ತೋರಿಸಿದ್ದಾರೆ. ತೋಟವನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಇತರ ಮಹಿಳೆಯರಿಗೆ ಆದರ್ಶವಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜೇಸಿ ಪೂರ್ವಾಧ್ಯಕ್ಷ ಚರಣರಾಜ್, ಜೇಸಿ ಕಾರ್ಯದರ್ಶಿ ರಜತ್ ವಗಡೆ, ಸಹ ಕಾರ್ಯದರ್ಶಿ ನವೀನ್, ನಿರ್ದೇಶಕರಾದ ಪುರುಶೋತ್ತಮ್, ಪವನ್ ಕರ್, ವಿನಯ್, ಜೋಯಿ ಬ್ರೋ, ಶ್ರೀ ಹರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ
ರಾಗಾ-ವೈಷ್ಣವ್‌ ಉದ್ಯೋಗ ಸೃಷ್ಟಿ ‘ಕ್ರೆಡಿಟ್‌ ವಾರ್’