ಮುಂಡಗೋಡ: ಮರ್ಮಾಂಗ ಹಿಸುಕಿ ಕೊಲೆ ಮಾಡಿ ಆಕಸ್ಮಿಕ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆ ಮಾಡಿದ್ದ ಪ್ರಕರಣಕ್ಕೆ 15 ದಿನಗಳ ನಂತರ ತಿರುವು ಸಿಕ್ಕಿದ್ದು, ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ಪತ್ನಿ ಶಾಂತವ್ವ ಟೊಪಣ್ಣ ಲಮಾಣಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.
ಆದರೆ ಶಾಂತವ್ವ ಇತ್ತೀಚೆಗೆ ಮೊಬೈಲ್ನಲ್ಲಿ ವ್ಯಕ್ತಿಯೊಬ್ಬರ ಜತೆ ಮಾತನಾಡುವಾಗ ಗಂಡನ ಮರ್ಮಾಂಗವನ್ನು ಹಿಚುಕಿ ಕೊಲೆ ಮಾಡಿದ್ದೇನೆ ಎಂದು ಹೇಳುವುದನ್ನು ಕೇಳಿಸಿಕೊಂಡ ಅಕ್ಕಪಕ್ಕದ ಮನೆಯವರು ಸಮಾಜದ ಹಿರಿಯರಿಗೆ ವಿಷಯ ತಿಳಿಸಿದ್ದಾರೆ. ಹಿರಿಯರು ಈ ಬಗ್ಗೆ ಸಭೆ ಸೇರಿ ಶಾಂತವ್ವನ ಮೊಬೈಲ್ ಫೋನ್ ಪರಿಶೀಲಿಸಿ ವಿಚಾರಣೆ ನಡೆಸಿದಾಗ ಗಂಡನ ಮರ್ಮಾಂಗವನ್ನು ಹಿಚುಕಿ ಕೊಲೆ ಮಾಡಿದ್ದೇನೆ ಎಂದು ಒಪ್ಪಿದ್ದಾಳೆ ಎನ್ನಲಾಗಿದ್ದು, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನೈತಿಕ ಸಂಬಂಧವೇ ಈ ರೀತಿ ಪತಿಯನ್ನು ಹತ್ಯೆ ಮಾಡಲುಕಾರಣ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಶಾಂತವ್ವನನ್ನು ಬಂಧಿಸಿದ್ದಾರೆ.