ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು

KannadaprabhaNewsNetwork |  
Published : Sep 09, 2024, 01:40 AM IST
ಸಾವು | Kannada Prabha

ಸಾರಾಂಶ

ದೇವರಹಿಪ್ಪರಗಿ: ತಾಲೂಕಿನ ಬಿ.ಬಿ.ಇಂಗಳಗಿ ಗ್ರಾಮದಲ್ಲಿ ಘನ ಗುರುಸಿದ್ದೇಶ್ವರ ಜಾತ್ರೆಯ ವೇಳೆ ರಥೋತ್ಸವದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಗ್ರಾಮದ ದೇವೇಂದ್ರ ಮನೋಹರ ಬಡಿಗೇರ (24) ಮೃತದುರ್ದೈವಿ. ಶನಿವಾರ ಗ್ರಾಮದಲ್ಲಿ ಘನ ಗುರುಸಿದ್ದೇಶ್ವರ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ಜಾತ್ರೆಯ ರಥೋತ್ಸವದ ವೇಳೆ ಈ ದುರ್ಘಟನೆ ಸಂಭವಿಸಿದೆ.

ದೇವರಹಿಪ್ಪರಗಿ: ತಾಲೂಕಿನ ಬಿ.ಬಿ.ಇಂಗಳಗಿ ಗ್ರಾಮದಲ್ಲಿ ಘನ ಗುರುಸಿದ್ದೇಶ್ವರ ಜಾತ್ರೆಯ ವೇಳೆ ರಥೋತ್ಸವದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಗ್ರಾಮದ ದೇವೇಂದ್ರ ಮನೋಹರ ಬಡಿಗೇರ (24) ಮೃತದುರ್ದೈವಿ. ಶನಿವಾರ ಗ್ರಾಮದಲ್ಲಿ ಘನ ಗುರುಸಿದ್ದೇಶ್ವರ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ಜಾತ್ರೆಯ ರಥೋತ್ಸವದ ವೇಳೆ ಈ ದುರ್ಘಟನೆ ಸಂಭವಿಸಿದೆ. ತೇರು ಎಳೆಯುವ ವೇಳೆ ಮೈ ಮೇಲೆ ರಥದ ಗಾಲಿ ಹರಿದು ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ, ಸ್ಥಳೀಯರು ಆತನನ್ನು ತಕ್ಷಣ ಆಸ್ಪತ್ರೆಗೆ ರವಾನಿಸಿದ್ದರು. ಆದ್ರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿಯೇ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ