ಕೂಡ್ಲಿಗಿ: ಸ್ನೇಹಿತರೊಂದಿಗೆ ಕೆರೆ ಕೊಡಿ ಬಳಿ ತೆರಳಿ ಸೆಲ್ಫಿ ತೆಗೆಯಲು ಹೋಗಿ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಶುಕ್ರವಾರ ರಾತ್ರಿ ಕೆ.ದಿಬ್ಬದಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಮೃತ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದರು.ಅನೈತಿಕ ಸಂಬಂಧ: ಪತ್ನಿಯ ಪ್ರಿಯಕರನ ಕೊಲೆ
ಹಗರಿಬೊಮ್ಮನಹಳ್ಳಿ: ತಾಲೂಕಿನ ಚಿಲುಗೋಡು ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಆನಂದೇವನಹಳ್ಳಿ ಬಸವರಾಜ್ (೨೬) ಎಂಬಾತನನ್ನು ವಿಜಯದಶಮಿ ಹಬ್ಬದ ಶನಿವಾರ ಮಧ್ಯಾಹ್ನ ೧ ಗಂಟೆಗೆ ಕೊಡಲಿಯಿಂದ ಕೊಚ್ಚಿ ಕೊಲೆಮಾಡಿದ ಘಟನೆ ಜರುಗಿದೆ.ಕೊಲೆ ಮಾಡಿದ ವ್ಯಕ್ತಿಯನ್ನು ಚಿಲುಗೋಡು ಗ್ರಾಮದ ಬಸರಕೋಡು ಫಕ್ಕೀರಸ್ವಾಮಿ ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಬಸವರಾಜ್ ಫಕ್ಕೀರಸ್ವಾಮಿ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿದೆ.
ಕೊಲೆಯಾದ ಶವದ ಮುಂದೆ ಕುಟುಂಬದವರು ರೋಧಿಸುತ್ತಿದ್ದದ್ದು ಕಂಡುಬಂತು. ಸ್ಥಳಕ್ಕೆ ಸಿಪಿಐ ವಿಕಾಸ್ ಲಮಾಣಿ, ತಂಬ್ರಹಳ್ಳಿ ಪಿಎಸ್ಐ ಗುರುಚಂದ್ರ ಯಾದವ್ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.ಒಂದೇ ಹಗ್ಗದ ಕುಣಿಕೆಗೆ ಶರಣಾದ ವಿವಾಹಿತ ಪ್ರೇಮಿಗಳು
ರಾಮನಗರ ತಾಲೂಕು ಕಾವೇರಿ ದೊಡ್ಡಿಯವರಾದ ಇಬ್ಬರೂ, ಬೇರೆ ಬೇರೆ ಮದುವೆಯಾಗಿದ್ದಾರೆ. ಆದರೆ, ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಮೃತ ಪುರುಷ ರಮೇಶ ದೊಡ್ಡಮಲ್ಲಯ್ಯ (34) ಮಹಿಳೆ ಪದ್ಮ (34) ಗಂಡ ವೆಂಕಟರಮಣ ಎಂದು ತಿಳಿದು ಬಂದಿದೆ.
ಅ. 9ರಂದು ಬುಧವಾರ ಮಧ್ಯಾಹ್ನ ಸ್ವಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸಿ, ಬೈಕ್ ಅನ್ನು ಚನ್ನಪಟ್ಟಣ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ, ಅಲ್ಲಿಂದ ಸಾರಿಗೆ ಬಸ್ಸಿನಲ್ಲಿ ಪ್ರಯಾಣ ಬೆಳೆಸಿ ಗುರುವಾರ ಸುಕ್ಷೇತ್ರ ಮೈಲಾರಕ್ಕೆ ಬಂದಿದ್ದಾರೆ.ಬೆಳಗ್ಗೆ ಮೈಲಾರದಲ್ಲಿ ಬಟ್ಟೆ ಖರೀದಿಸಿ ನಂತರ ದೇವರ ದರ್ಶನ ಪಡೆದು, ಪ್ರಸಾದವನ್ನು ಸ್ವೀಕರಿಸಿ ಸಂಜೆ ವರೆಗೂ ಸುಕ್ಷೇತ್ರದೆಲ್ಲೆಡೆ ಹಾಗೂ ನದಿಯ ತೀರದಲ್ಲಿ ಓಡಾಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಂತರ ಗುರುವಾರ ತಡರಾತ್ರಿ ಇವರಿಬ್ಬರು ತುಂಗಭದ್ರಾ ನದಿ ತೀರದಲ್ಲಿರುವ ಮರದ ಕೊಂಬೆಗೆ ಒಂದೆ ಹಗ್ಗದಲ್ಲಿ ನೇಣು ಬಿಗಿದುಕೊಂಡಿದ್ದಾರೆ.
ಸ್ಥಳಕ್ಕೆ ಹಿರೇಹಡಗಲಿ ಪಿಎಸ್ಐ ಭರತ ರೆಡ್ಡಿ ಎಎಸ್ಐ ಮಲ್ಲಿಕಾರ್ಜುನ ನಾಯ್ಕ ಹಾಗೂ ಸಿಬ್ಬಂದಿ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.