ಹೊಗೇನಕಲ್ನಲ್ಲಿ ಆಡಲು ಹೋದ ಹೊಸಕೋಟೆ ಯುವಕ ನೀರುಪಾಲು

KannadaprabhaNewsNetwork |  
Published : May 10, 2026, 01:45 AM IST
ಹೊಗೇನಕಲ್ ಜಲಪಾತದಲ್ಲಿ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವ | Kannada Prabha

ಸಾರಾಂಶ

ಹನೂರು: ಬೇಸಿಗೆಯಲ್ಲಿ ನೀರಿನಲ್ಲಿ ಆಡಿ ತಂಪಾಗಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹನೂರಿನ ಹೊಗೇನಕಲ್‌ ಜಲಪಾತಕ್ಕೆ ಬಂದ ಐವರು ಯುವಕರ ಪೈಕಿ ಓರ್ವ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ಆಘಾತಕಾರಿ ಘಟನೆಯು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೇನಕಲ್‌ನಲ್ಲಿ ಶನಿವಾರ ಸಂಭವಿಸಿದೆ. ಘಟನೆ ಸಂಬಂಧ ಪೊಲೀಸರು ಶವ ಹೊರತೆಗೆದಿದ್ದಾರೆ

ಹನೂರು: ಬೇಸಿಗೆಯಲ್ಲಿ ನೀರಿನಲ್ಲಿ ಆಡಿ ತಂಪಾಗಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹನೂರಿನ ಹೊಗೇನಕಲ್‌ ಜಲಪಾತಕ್ಕೆ ಬಂದ ಐವರು ಯುವಕರ ಪೈಕಿ ಓರ್ವ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ಆಘಾತಕಾರಿ ಘಟನೆಯು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೇನಕಲ್‌ನಲ್ಲಿ ಶನಿವಾರ ಸಂಭವಿಸಿದೆ. ಘಟನೆ ಸಂಬಂಧ ಪೊಲೀಸರು ಶವ ಹೊರತೆಗೆದಿದ್ದಾರೆ.

ಹೊಸಕೋಟೆ ತಾಲೂಕಿನ ಕುರಹಟ್ಟಿ ಗ್ರಾಮದ ಶಶಿಕುಮಾರ್‌ (36) ಮೃತ ದುರ್ದೈವಿ.

ಶಶಿಕುಮಾರ್‌ ಸೇರಿ ಐವರು ಸ್ನೇಹಿತರು ವಾರಾಂತ್ಯದ ಕಾರಣ ಬೆಂಗಳೂರಿನಿಂದ ಹೊಗೇನಕಲ್‌ ನೋಡಲು ಬಂದಿದ್ದಾರೆ. ಈ ವೇಳೆ ಜಲಪಾತ ನೋಡಿ, ಹೊಳೆಯಲ್ಲಿ ಆಡಲು ನೀರಿಗೆ ಇಳಿದಿದ್ದಾರೆ. ಈ ವೇಳೆ ಶಶಿಕುಮಾರ್‌ ಅವರು ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ. ಮಾರಿಕೋಟ ಜಲಪಾತದ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ತೆರಳಿ ನುರಿತ ಈಜುಗಾರರಿಂದ ಶೋಧ ನಡೆಸಿ, ಶವ ಮೇಲೆತ್ತಿದ್ದಾರೆ. ಘಟನೆಯಲ್ಲಿ ಮಿಕ್ಕ ನಾಲ್ವರು ಸುರಕ್ಷಿತರಾಗಿದ್ದಾರೆ. ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟಿ.ಬೇಕುಪ್ಪೆ ಡೇರಿಯಲ್ಲಿ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಸಂಸದರಿಂದ ವಂದರಾಗುಪ್ಪೆ ರೈಲ್ವೆ ಕೆಳಸೇತುವೆ ಕಾಮಗಾರಿ ಪರಿಶೀಲನೆ