ದೊಡ್ಡ ಅರಸಿನಕೆರೆಯಲ್ಲಿ ಕತ್ತು ಸೀಳಿ ಯುವಕನ ಕೊಲೆ

KannadaprabhaNewsNetwork |  
Published : Jan 30, 2024, 02:03 AM IST
ಮನೆಯೊಂದರಲ್ಲಿ ಕತ್ತು ಸೀಳಿ ಯುವಕನ ಕೊಲೆ | Kannada Prabha

ಸಾರಾಂಶ

ನಾಗೇಶ್, ಅಲಿಯಾಸ್ ಸ್ಪಾಟ್ (35) ಎಂಬಾತ ಕೊಲೆಯಾದ ಯುವಕ. ಚೇತನ್ ಅಲಿಯಾಸ್ ಗಣೆಯಾರ ಚೇತ ಎಂಬುವವರ ಮನೆಯಲ್ಲಿ ಕೊಲೆ ನಡೆದಿದ್ದು, ಪೊಲೀಸರು ಚೇತನ್, ಅಲಿಯಾಸ್ ಗಣೆಯಾರ ಚೇತ ಎಂಬುವವನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಭಾರತೀನಗರ: ಯಾರೂ ಇಲ್ಲದ ಮನೆಯಲ್ಲಿ ಯುವಕನೊಬ್ಬನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದೊಡ್ಡ ಅರಸಿನಕೆರೆ ಗ್ರಾಮದಲ್ಲಿ ನಡೆದಿದೆ. ಚೌಡಯ್ಯ, ಉರುಫ್ ತಮ್ಮಯ್ಯ ಎಂಬುವವರ ಪುತ್ರ ನಾಗೇಶ್, ಅಲಿಯಾಸ್ ಸ್ಪಾಟ್ (35) ಎಂಬಾತ ಕೊಲೆಯಾದ ಯುವಕ. ಚೇತನ್ ಅಲಿಯಾಸ್ ಗಣೆಯಾರ ಚೇತ ಎಂಬುವವರ ಮನೆಯಲ್ಲಿ ಕೊಲೆ ನಡೆದಿದ್ದು, ಪೊಲೀಸರು ಚೇತನ್, ಅಲಿಯಾಸ್ ಗಣೆಯಾರ ಚೇತ ಎಂಬುವವನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕಳೆದ ಭಾನುವಾರ ಮಳವಳ್ಳಿ ತಾಲೂಕಿನ ಕೊಂಡದ ಮಾರಮ್ಮನ ದೇವಾಲಯಕ್ಕೆ ತೆರಳಿದ್ದ ಸಂದರ್ಭ ನಾಗೇಶ್ ಮತ್ತು ಚೇತನ್ ನಡುವೆ ಜಗಳ ನಡೆದಿತ್ತು. ಅಭಿ, ಅಲಿಯಾಸ್ ಕಟ್ಟಪ್ಪ, ಚಂದ್ರ, ಅಲಿಯಾಸ್ ಹಿಟಾಚಿ ಮತ್ತಿತರ ಸ್ನೇಹಿತರೂ ಕೂಡ ಚೇತನ್ ಜೊತೆಗೆ ಸಾಥ್ ನೀಡಿದ್ದರು. ಅಲ್ಲಿಂದ ಊರಿಗೆ ತೆರಳಿದ ನಂತರ ಗ್ರಾಮದ ಸೊಸೈಟಿ ಹಿಂಭಾಗ ಮತ್ತೆ ಇದೇ ಚೇತನ್, ನಾಗೇಶ್ ಮೇಲೆ ಜಗಳ ತೆಗೆದು ಹಲ್ಲೆಗೆ ಮುಂದಾಗಿದ್ದನೆಂದು ಹೇಳಲಾಗಿದೆ.ಈ ಸಂಬಂಧ ಗ್ರಾಮದ ಕೆಲವು ಮುಖಂಡರು ರಾಜೀ ಸಂಧಾನ ನಡೆಸಿ ಇಬ್ಬರನ್ನು ಮನೆಗೆ ಕಳುಹಿಸಿದ್ದರು. ಮತ್ತೆ ಸೋಮವಾರ ಹಳೆಯ ಘಟನೆ ಮರುಕಳಿಸಿದ್ದು, ತನ್ನ ಮನೆಯಲ್ಲಿದ್ದ ನಾಗೇಶನನ್ನು ಮೊಬೈಲ್ ಮೂಲಕ ಕರೆ ಮಾಡಿ ಗಣೆಯಾರ ಚೇತನ್ ಮನೆಗೆ ಕರೆಯಿಸಿದ್ದು, ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕೊಲೆ ಯಾರು ಮಾಡಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ. ತೀವ್ರ ರಕ್ತಸ್ರಾವವಾಗಿ ನಾಗೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ್ದರಿಂದ ನಾಗೇಶ್ ಚೀರಾಟ ಯಾರಿಗೂ ಕೇಳಿಸಿಲ್ಲ ಎಂಬುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.ನಂತರ ಸ್ಥಳಕ್ಕೆ ಆಗಮಿಸಿದ ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ನಾಗೇಶ್ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ,

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

163 ವೈದ್ಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಅನೈತಿಕ ಸಂಬಂಧ ಮುಚ್ಚಿಕೊಳ್ಳಲುಸುಳ್ಳು ವಂಚನೆಯ ಕಥೆ ಕಟ್ಟಿದ ಪತಿ