ಈಜಲು ಹೋಗಿದ್ದ ಯುವಕ ಸಾವು

KannadaprabhaNewsNetwork |  
Published : Oct 28, 2023, 01:15 AM IST

ಸಾರಾಂಶ

ಯುವಕನೊಬ್ಬ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ಪ್ರಸಿದ್ಧ ಯಾತ್ರಾಸ್ಥಳವಾದ ಮುತ್ತತ್ತಿಯಲ್ಲಿ ನಡೆದಿದೆ.

ಮಂಡ್ಯ: ಯುವಕನೊಬ್ಬ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ಪ್ರಸಿದ್ಧ ಯಾತ್ರಾಸ್ಥಳವಾದ ಮುತ್ತತ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿ ಲಿಂಗರಾಜಪುರದ ಅಭಿಷೇಕ್ (21) ಮೃತಪಟ್ಟ ಯುವಕ. ಮೂವರು ಸ್ನೇಹಿತರೊಂದಿಗೆ ಅಭಿಷೇಕ್ ವಿಹಾರಕ್ಕೆ ಎಂದು ಗುರುವಾರ ಮಧ್ಯಾಹ್ನ ಕ್ಯಾಬ್‌ನಲ್ಲಿ ಮುತ್ತತ್ತಿಗೆ ಬಂದಿದ್ದರು. ಈ ವೇಳೆ ಈಜಲು ಕಾವೇರಿ ನದಿಗೆ ಇಳಿದ ಅಭಿಷೇಕ್ ನದಿ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಮೃತನ ದೇಹ ಪತ್ತೆಯಾಗಿದೆ. ಹಲಗೂರು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಂತರ ಶವವನ್ನು ವಾರಸುದಾರರಿಗೆ ನೀಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತದ ಗುರು-ಶಿಷ್ಯ ಪರಂಪರೆ ಜಗತ್ತಿನಲ್ಲಿಯೇ ಶ್ರೇಷ್ಠ: ಚಕ್ರವರ್ತಿ ಸೂಲಿಬೆಲೆ
ನೀತಿ, ನಿಯಮ ಇಲ್ಲದೆ ಸಮಾಜ, ನಾಡು ಬೆಳೆಯದು: ರಂಭಾಪುರಿ ಶ್ರೀ