ತುಂಗಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನಾಪತ್ತೆ

KannadaprabhaNewsNetwork |  
Published : Nov 04, 2024, 12:20 AM IST

ಸಾರಾಂಶ

A young man who went swimming in the Tungabhadra river has gone missing

ಸಿಂಧನೂರು: ತಾಲೂಕಿನ ಮುಕುಂದ ಗ್ರಾಮದ ತುಂಗಭದ್ರಾ ನದಿಗೆ ಈಜಲು ಹೋದ ಯುವಕನೊಬ್ಬ ಕೊಚ್ಚಿಕೊಂಡು ಹೋಗಿರುವ ಘಟನೆ ಭಾನುವಾರ ಜರುಗಿದೆ. ನಗರದ ಬಡಿ ಬೇಸ್ ಬಡಾವಣೆಯ ಮಹಿಬೂಬ್ (23) ಎಂಬ ಯುವಕ ನಾಪತ್ತೆಯಾಗಿದ್ದಾನೆ. ಸ್ನೇಹಿತರಿಬ್ಬರು ಬೆಳಗ್ಗೆ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಕಾಲು ಜಾರಿ ನದಿಗೆ ಬಿದ್ದಿದ್ದಾನೆ. ಮತ್ತೊಬ್ಬ ಸ್ನೇಹಿತ ಅಬ್ಬು ಎಂಬಾತನನ್ನು ಗ್ರಾಮಸ್ಥರು ರಕ್ಷಿಸಿ ಪ್ರಾಣಪಾಯದಿಂದ ಪಾರು ಮಾಡಿದ್ದಾರೆ. ಆದರೆ ಮಹಿಬೂಬ್ ರಾತ್ರಿ 7 ಗಂಟೆ ಯಾದರೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ವೀರಾರೆಡ್ಡಿ ಭೇಟಿ ನೀಡಿದ್ದಾರೆ. ಮೇಲಾಧಿಕಾರಿಗೆ ಮಾಹಿತಿ ನೀಡಿ ಈಜು ತಜ್ಞರನ್ನು ಕರೆಸಿ ಶೋಧಕಾರ್ಯಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಜೆಸ್ಟಿಕ್‌ನಲ್ಲಿ ಸಿಂಗಾಪುರ ಮೀರಿಸುವ ಪ್ರಾಜೆಕ್ಟ್‌ ಮೆಜೆಸ್ಟಿಕ್‌
ಬೀಗ ಹಾಕಿದ ಮನೆಗಳಿಗೆ ಕನ್ನಹಾಕುತ್ತಿದ್ದ ಐವರು ಕಳ್ಳರ ಸೆರೆ