ಗಂಗಾವತಿಯಲ್ಲಿ ಆಧಾರ್‌ ಕಾರ್ಡ್‌ ತಿದ್ದುಪಡಿಗೆ ಹರಸಾಹಸ

KannadaprabhaNewsNetwork |  
Published : Jul 15, 2026, 02:45 AM IST
13ುಲು1 | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶದಿಂದ ಬರುವ ಜನರು ಬೆಳಗ್ಗೆಯಿಂದಲೆ ಟೋಕನ್‌ಗಾಗಿ ಕಾಯುವ ಪರಿಸ್ಥಿತಿ ಒದಗಿದೆ.

ರಾಮಮೂರ್ತಿ ನವಲಿ ಗಂಗಾವತಿ

ನಗರದ ತಹಸೀಲ್‌ ಕಚೇರಿ ಅವ್ಯವಸ್ಥೆಯ ಆಗರವಾಗಿದ್ದು, ಆಧಾರ್ ಕಾರ್ಡು ಸೇರಿದಂತೆ ವಿವಿಧ ಪ್ರಮಾಣ ಪತ್ರಗಳಿಗಾಗಿ ಜನರು ಅಲೆದಾಡುವ ಪರಿಸ್ಥಿತಿ ಒದಗಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಆಧಾರ್ ಕಾರ್ಡ್‌ಗಳ ತಿದ್ದುಪಡಿ ಮತ್ತು ಹೊಸದಾಗಿ ಸೇರ್ಪಡೆ ಮಾಡುವ ಕಾರ್ಯ ಈಗ ಪ್ರಾರಂಭವಾಗಿದ್ದು, ನೂಕುನುಗ್ಗಲು ಉಂಟಾಗಿದೆ.

ಎಸ್‌ಐಆರ್‌, ಗೃಹಲಕ್ಷ್ಮೀ ಯೋಜನೆಯ ಪುನರ್ ಪರಿಶೀಲನೆ ಘೋಷಿಸಿದ ಹಿನ್ನೆಲೆಯಲ್ಲಿ ಜನರು ಮೂಲ ಪ್ರಮಾಣ ಪತ್ರಗಳಿಗಾಗಿ ತಹಸೀಲ್‌ ಕಚೇರಿ ಅಲೆಯುತ್ತಿದ್ದಾರೆ. ನಗರದ ತಹಸೀಲ್‌ ಕಚೇರಿಯ ಪಡಸಾಲೆಯಲ್ಲಿ ಆಧಾರ್ ಕಾರ್ಡ್‌ ಪಡೆಯಲು ಸೋಮವಾರ ನೂಕುನುಗ್ಗಲು ನಡೆಸಿದರು.

40 ಟೋಕನ್ ವಿತರಣೆ: ನಗರ ಸೇರಿದಂತೆ ಗ್ರಾಮೀಣ ಪ್ರದೇಶದಿಂದ ಬರುವ ಜನರು ಬೆಳಗ್ಗೆಯಿಂದಲೆ ಟೋಕನ್‌ಗಾಗಿ ಕಾಯುವ ಪರಿಸ್ಥಿತಿ ಒದಗಿದೆ. ಕಚೇರಿಯ ಪಡಸಾಲೆಯಲ್ಲಿ ಕೇವಲ 40 ಜನರಿಗೆ ಮಾತ್ರ ಟೋಕನ್ ನೀಡುತ್ತಿದ್ದಾರೆ. ಈ ಟೋಕನ್ ಪಡೆಯಲು ಜನರು ಹರಸಾಹಸ ಮಾಡುವಂತಾಗಿದೆ. ಟೋಕನ್ ಪಡೆದ ಆನಂತರ ಆಧಾರ್ ಕಾರ್ಡ್‌ಗಳ ತಿದ್ದುಪಡಿಗೆ ಮತ್ತೆ ಸಾಹಸ ಮಾಡುವ ಪರಿಸ್ಥಿತಿ ಇದೆ. ಈ ಹಿಂದೆ ಪಡಸಾಲೆಯಲ್ಲಿ ಎರಡು ಕೇಂದ್ರಗಳಿದ್ದವು. ಆನಂತರ ಒಂದು ಕೇಂದ್ರ ರದ್ದುಪಡಿಸಿರುವುದರಿಂದ ಉಳಿದಿರುವ ಇನ್ನೊಂದು ಕೇಂದ್ರದ ಮೇಲೆ ಒತ್ತಡ ಹೆಚ್ಚಿದೆ. ಹೆಚ್ಚುವರಿ ಕಂಪ್ಯೂಟರ್‌ ಆಪರೇಟರ್‌ ಇದ್ದರೂ ಕೆಲಸ ಮಾಡಲು ಸಾಧ್ಯವಾಗದಂತಾಗಿದೆ.

ಗಂಗಾವತಿ ತಾಲೂಕಿನಲ್ಲಿ ಗಂಗಾವತಿ, ವೆಂಕಟಗಿರಿ ಹೋಬಳಿಯಲ್ಲಿ ಆಧಾರ್ ಕಾರ್ಡ್‌ಗಳ ತಿದ್ದುಪಡಿ ಮಾಡುವ ಕೇಂದ್ರ ಇತ್ತು, ಈಗ ಅದು ರದ್ದಾಗಿದೆ. ಮರಳಿ ಹೋಬಳಿಯಲ್ಲಿ ಮಾತ್ರ ಆಧಾರ್ ಕಾರ್ಡುಗಳ ತಿದ್ದುಪಡಿ ಮಾಡುವ ಅವಕಾಶ ಇರುವುದರಿಂದ ಜನರು ದಿನ ನಿತ್ಯ ಅಲೆದಾಡುವ ಪರಿಸ್ಥಿತಿ ಒದಗಿದೆ.

ಗಂಗಾವತಿ ತಹಸೀಲ್‌ ಕಚೇರಿ ಅವ್ಯವಸ್ಥೆಯ ಆಗರವಾಗಿದೆ. ಆಧಾರ್ ಕಾರ್ಡ್‌ಗಳ ತಿದ್ದುಪಡಿ ಸೇರಿದಂತೆ ವಿವಿಧ ಪ್ರಮಾಣಪತ್ರ ಪಡೆಯಬೇಕಾದರೆ ಒಂದು ದಿನ ಕಚೇರಿಯಲ್ಲಿ ಕಳೆಯುವ ಪರಿಸ್ಥಿತಿ ಇದೆ. ಸಮಸ್ಯೆ ಹೇಳಬೇಕಾದರೆ ಹೊಸದಾಗಿ ಬಂದ ತಹಸೀಲ್ದಾರರು ಕಚೇರಿಯಲ್ಲಿ ಸಿಗುತ್ತಿಲ್ಲ. ಇದರಿಂದ ಆಧಾರ್ ಕಾರ್ಡುಗಳ ತಿದ್ದುಪಡಿಗಾಗಿ ನೂಕುನುಗ್ಗಲು ಉಂಟಾಗಿದೆ ಎಂದು ಗಂಗಾವತಿಯ ತಿಮ್ಮಪ್ಪ ತಿಳಿಸಿದ್ದಾರೆ.

ಗಂಗಾವತಿ ತಹಸೀಲ್‌ ಕಚೇರಿಯಲ್ಲಿ ಆಧಾರ್ ಕಾರ್ಡು ತಿದ್ದುಪಡಿಗಾಗಿ ನೂಕುನುಗ್ಗಲು ಉಂಟಾಗಿದೆ ಎಂದು ಗೊತ್ತಾಗಿದೆ. ಪ್ರಭಾರಿ ಗ್ರೇಡ್ -2 ತಹಸೀಲ್ದಾರರಾಗಿ ಇವತ್ತು ಹಾಜರಾಗಿದ್ದೇನೆ. ನನಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ ಎಂದು ಗಂಗಾವತಿ ಪ್ರಭಾರಿ ಗ್ರೇಡ್-2 ತಹಸೀಲ್ದಾರ್‌ ಷಣ್ಮುಖಪ್ಪ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿರಿಯ ಅರ್ಥಧಾರಿಗಳಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ
ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ