ಅಲೆಮಾರಿ ಜನಾಂಗದವರಿಗೆ ಆಧಾರ್ ಆಂದೋಲನ: ಡೀಸಿ ಶುಭ ಕಲ್ಯಾಣ್

KannadaprabhaNewsNetwork |  
Published : Jul 15, 2025, 11:45 PM IST
ಡಿಸಿ  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಅಲೆಮಾರಿ ಜನಾಂಗಕ್ಕೆ ಸೇರಿದ ಕೆಲವರು ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳಿಲ್ಲದಿರುವ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದಿರುವುದರಿಂದ ತಾಲೂಕು ಮಟ್ಟದಲ್ಲಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಅಲೆಮಾರಿ ಜನಾಂಗದವರನ್ನು ಗುರುತಿಸಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಒದಗಿಸಲು ಕ್ರಮವಹಿಸಲಾಗುವುದು.

ತುಮಕೂರು: ಜಿಲ್ಲೆಯಲ್ಲಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಅಲೆಮಾರಿ ಜನಾಂಗದವರಿಗೆ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ತಲುಪಿಸುವ ಸಲುವಾಗಿ ತಾಲೂಕು ಮಟ್ಟದಲ್ಲಿ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಲೆಮಾರಿ ಜನಾಂಗಕ್ಕೆ ಸೇರಿದ ಕೆಲವರು ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳಿಲ್ಲದಿರುವ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದಿರುವುದರಿಂದ ತಾಲೂಕು ಮಟ್ಟದಲ್ಲಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಅಲೆಮಾರಿ ಜನಾಂಗದವರನ್ನು ಗುರುತಿಸಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಒದಗಿಸಲು ಕ್ರಮವಹಿಸಲಾಗುವುದು. ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಜಿಲ್ಲೆಯ ಅಲೆಮಾರಿ ಜನಾಂಗದವರು ಸಂಬಂಧಪಟ್ಟ ತಾಲೂಕು ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 7304975519 ನ್ನು ಸಂಪರ್ಕಿಸಿ ತಮ್ಮ ಮಾಹಿತಿಯನ್ನು ನೀಡಬೇಕು. ಅಲ್ಲದೆ, ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಜಿಲ್ಲೆಯ ಅಲೆಮಾರಿ ಜನಾಂಗದವರ ಬಗ್ಗೆ ಮಾಹಿತಿ ಹೊಂದಿರುವ ಸಾರ್ವಜನಿಕರು/ ಸ್ವಯಂ ಸೇವಾ ಸಂಘಗಳು/ ಸ್ವಯಂ ಸೇವಕರು ಮೇಲ್ಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು