ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಆಧಾರ್ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಮಾತನಾಡಿ, 5 ವರ್ಷದ ನಂತರ ಆಧಾರ್ ನಲ್ಲಿ ಮಕ್ಕಳ ಬಯೋಮೆಟ್ರಿಕ್ ಪಡೆದುಕೊಳ್ಳುತ್ತಾರೆ. ಮಕ್ಕಳಿಗೆ ಸರ್ಕಾರದಿಂದ ನೀಡಲಾಗುವ ಎಲ್ಲಾ ಸೌಲಭ್ಯಗಳಿಗೆ ಆಧಾರ್ ಕಡ್ಡಾಯ. ಬಯೋಮೆಟ್ರಿಕ್ ನೀಡದ ಮಕ್ಕಳ ಆಧಾರ್ ನವೀಕರಣಕ್ಕೆ ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಮಾನಸಿಕ ಅಸ್ವಸ್ಥರು, ವೃದ್ಧರು ಸೇರಿ 18 ವರ್ಷ ಮೇಲ್ಪಟ್ಟ 800ಕ್ಕೂ ಹೆಚ್ಚು ಜನ ಆಧಾರ್ ನಲ್ಲಿ ನೋಂದಣಿ ಮಾಡಿಕೊಂಡಿಲ್ಲ. ಆಧಾರ್ ನಲ್ಲಿ ನೋಂದಣಿ ಆಗದವರ ಪಟ್ಟಿ ತೆಗೆದುಕೊಂಡು ಅವರಿಗೆ ದಾಖಲಾತಿಗಳನ್ನು ಸಿದ್ಧಪಡಿಸಿ 1 ತಿಂಗಳ ಒಳಗಾಗಿ ಆಧಾರ್ ನೋಂದಣಿ ಮಾಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಪ್ರಸ್ತುತ 188 ಆಧಾರ್ ಸೇವಾ ಕೇಂದ್ರಗಳಿವೆ. ಆಯ್ದ ಪೋಸ್ಟ್ ಆಫೀಸ್ ಮತ್ತು ಬ್ಯಾಂಕ್ ಗಳಲ್ಲಿ ಸಹ ಆಧಾರ್ ನೋಂದಣಿ ಮತ್ತು ನವೀಕರಣ ನಡೆಯುತ್ತದೆ. ಕೇಂದ್ರಗಳ ಮುಂದೆ ಸಾರ್ವಜನಿಕರಿಗೆ ಆಧಾರ್ ನವೀಕರಣ ಹಾಗೂ ಅವಶ್ಯಕತೆ ಬಗ್ಗೆ ಮಾಹಿತಿ ಅನಾವರಣಗೊಳಿಸಬೇಕು. ಕರಪತ್ರ ಹಾಗೂ ಬ್ಯಾನರ್ ಅನಾವರಣಗೊಳಿಸಿ ಹೆಚ್ಚಿನ ಪ್ರಚಾರ ನೀಡುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ 1,18,539 ಜನರು ತಮ್ಮ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿಕೊಂಡಿಲ್ಲ. ಅನಕ್ಷರಸ್ಥರು ಹಾಗೂ ಗ್ರಾಮೀಣ ಭಾಗದ ಕೆಲವರಿಗೆ ವಿಳಾಸ ಮತ್ತು ಮೊಬೈಲ್ ನಂಬರ್ ಅಪ್ಡೇಟ್ ಮಾಡಿಸುವುದು ತಿಳಿಯುವುದಿಲ್ಲ. ಪೋಸ್ಟ್ ಆಫೀಸ್ ಹಾಗೂ ಬ್ಯಾಂಕ್ ಗಳು ಇದರ ಬಗ್ಗೆ ಜನರಿಗೆ ಅರಿವು ಮೂಡಿಸಿ ಆಶಾ ಕಾರ್ಯಕರ್ತೆಯರ ಸಹಾಯ ಪಡೆದು ಮೊಬೈಲ್ ನಂಬರ್ ಅಪ್ಡೇಟ್ ಮಾಡಿಸಬೇಕು ಎಂದು ಸೂಚಿಸಿದರು.
ಆಧಾರ್ ನೋಂದಣಿದಾರರು ತಮ್ಮ ಆಧಾರ್ ಸಂಖ್ಯೆಯಲ್ಲಿ ನೋಂದಣಿ ಆಗಿರುವ ವಿಳಾಸವನ್ನು ಬದಲಾಯಿಸಿಕೊಳ್ಳಬೇಕಾದರೆ ಸೇವಾ ಕೇಂದ್ರಕ್ಕೆ ಹೋಗಬೇಕಿಲ್ಲ, ಸ್ವತಃ ತಾವೇ ತಮ್ಮ ಮೊಬೈಲ್ ನಲ್ಲಿ ಎಂ. ಆಧಾರ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ವಿಳಾಸ ಬದಲಾಯಿಸಿಕೊಳ್ಳಬಹುದು. ಹಾಗೂ ಆನ್ಲೈನ್ ಮತ್ತು ಆಫ್ಲೈನ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆ ಫ್ರಾಡ್ ಆದರೆ ನಿಮ್ಮ ಖಾತೆಯನ್ನು ಎಂ. ಆಧಾರ್ ಆ್ಯಪ್ ಮುಖಾಂತರ ಲಾಕ್ ಮಾಡಬಹುದು. ಇದರ ಕುರಿತಾಗಿ ಜನರಿಗೆ ಹೆಚ್ಚಿನ ಪ್ರಚಾರ ಕೈಗೊಳ್ಳಿ ಎಂದು ತಿಳಿಸಿದರು.
ಸಭೆಯಲ್ಲಿ ರಾಜ್ಯ ಆಧಾರ್ ನೋಡಲ್ ಅಧಿಕಾರಿ ವಿಜಯ್ ಕುಮಾರ್, ಜಿಲ್ಲಾಧಿಕಾರಿ ಕಚೇರಿ ಆಧಾರ್ ಮುಖ್ಯಸ್ಥ ವೇಣು ಗೋಪಾಲ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್, ಜಿಲ್ಲಾ ಸಾಕ್ಷರತಾ ಕಚೇರಿ ಅಧಿಕಾರಿ ಲಕ್ಷ್ಮೀ, ರಂಗಪ್ಪ ಸಾಲಾಪೂರ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.