ಹಿರಿಯರ ಹಾದಿ ಮರೆಯಬಾರದು: ವಾರಿಜಾ

KannadaprabhaNewsNetwork |  
Published : Aug 05, 2026, 02:45 AM IST
 ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಮಂಗಳವಾರ ಆಟಿಹಬ್ಬವನ್ನುಚೇರಂಬಾಣೆ ಗೌಡ ಸಮಾಜದ ಸಭಾಂಗಣದಲ್ಲಿ ಭಾಗಮಂಡಲಕಾವೇರಿ ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ಸೂರ್ತಲೆ ವಾರಿಜಾ ಮೋಹನ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. | Kannada Prabha

ಸಾರಾಂಶ

ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ವತಿಯಿಂದ ಮಂಗಳವಾರ ಆಟಿಹಬ್ಬವನ್ನು ಚೇರಂಬಾಣೆ ಗೌಡ ಸಮಾಜದ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ನಾಪೋಕ್ಲು: ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ವತಿಯಿಂದ ಮಂಗಳವಾರ ಆಟಿಹಬ್ಬವನ್ನು ಚೇರಂಬಾಣೆ ಗೌಡ ಸಮಾಜದ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಭಾಗಮಂಡಲ ಕಾವೇರಿ ಗೌಡ ಮಹಿಳಾ ಘಟಕದ ಅಧ್ಯಕ್ಷೆ ಸೂರ್ತಲೆ ವಾರಿಜಾ ಮೋಹನ್ ಉದ್ಘಾಟಿಸಿದರು. ಹಿರಿಯರು ನಡೆದು ಬಂದ ಹಾದಿಯನ್ನು ನಾವು ಎಂದೂ ಮರೆಯಬಾರದು. ನಮ್ಮ ಆಚಾರ ವಿಚಾರ ಪದ್ಧತಿ ಪರಂಪರೆಗಳನ್ನು ಉಳಿಸಿ ಪೋಷಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದರು.

ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಮಾತನಾಡಿ, ನಮ್ಮ ಪೂರ್ವಿಕರ ಆಹಾರ ಪದ್ಧತಿಯನ್ನು ನಾವು ಮರೆಯದೆ ಅನುಸರಿಸಬೇಕು ಎಂದರು.

ಕಾರುಗುಂದ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಮಾತನಾಡಿ, ಇಂತಹ ಕಾರ್ಯಕ್ರಮಳಿಂದ ಪರಸ್ಪರ ಹಿರಿಯ ಕಿರಿಯರಲ್ಲಿ ಉತ್ತಮ ಬಾಂಧವ್ಯ ಮೂಡುತ್ತದೆ ಎಂದರು.ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರುಗುಂದ ಯುವ ವೇದಿಕೆ ಅಧ್ಯಕ್ಷ ಪ್ರದೀಪ್ ಪಾರೆಮಜಲು, ದೇವನೂರು ಗೌಡ ಒಕ್ಕೂಟದ ನಿರ್ದೇಶಕ ಗುಡ್ಡೆರ ಲಕ್ಷು

ಸೋಮಣ್ಣ ಅನಿಸಿಕೆ ವ್ಯಕ್ತಪಡಿಸಿದರು.

ಆಟಿ ಸೊಪ್ಪಿನ ರಸದಿಂದ ತಯಾರಿಸಿದ ವಿವಿಧ ಖಾದ್ಯಗಳು, ಮರ ಕೆಸುವಿನ ಖಾದ್ಯಗಳು, ಮಳೆಗಾಲದಲ್ಲಿ ದೊರೆಯುವ ಫಲ ಪುಷ್ಪಗಳನ್ನು ಪ್ರದರ್ಶನಕ್ಕೆ ಇರಿಸಲಾಗಿತ್ತು. ಬೈಮನ ಭವಾನಿ ದಿಲೀಪ್ ಮತ್ತು ಹೊಸ ಮನೆ ಶೋಭಾ ವೆಂಕಪ್ಪ ಪ್ರಾರ್ಥನೆ ನೆರವೇರಿಸಿದರು. ಬೈಚನ ಸ್ವಾತಿ ಮಂದಪ್ಪ ಸ್ವಾಗತಿಸಿ, ಕೇಕಡ ಪೂಜಾ ನಾಗೇಂದ್ರ ನಿರೂಪಿಸಿ, ಬೈಮನ ಜ್ಯೋತಿ ತಿಮ್ಮಯ್ಯ ವಂದಿಸಿದರು.

ಮಧ್ಯಾಹ್ನದ ಭೋಜನಕ್ಕೆ ಆಟಿ ಹಬ್ಬದ ವಿವಿಧ ಖಾದ್ಯಗಳನ್ನು ತಯಾರಿಸಲಾಗಿತ್ತು. ಗೌಡ ಸಮಾಜದ ನಿರ್ದೇಶಕರು, ಮಹಿಳಾ ಒಕ್ಕೂಟದ ನಿರ್ದೇಶಕರು, ಯುವ ವೇದಿಕೆ ನಿರ್ದೇಶಕರು, ಒಕ್ಕೂಟದ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷ ಬಲಪಡಿಸಲು ಸಂಘಟನ ಸೃಜನ ಅಭಿಯಾನ: ಎಸ್.ಆರ್.ಪಾಟೀಲ
ತುಳುನಾಡಿನ ಸೊಬಗನ್ನು ತೆರೆದಿಟ್ಟ ‘ಆಟಿದ ಕಮ್ಮೆನ’ ಕಾರ್ಯಕ್ರಮ