ನೆಡುತೋಪು ನಿರ್ಮಾಣ ಕೈ ಬಿಟ್ಟು, ರೈತರಿಗೆ ಹಕ್ಕುಪತ್ರ ನೀಡಿ

KannadaprabhaNewsNetwork |  
Published : Jan 21, 2025, 01:31 AM IST
20 ಜೆ.ಜಿ.ಎಲ್.3)‌ ಜಗಳೂರು ತಾಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಉಳುಮೆಮಾಡುತ್ತಿರುವ  ರೈತರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ(ಹುಚ್ಚವ್ವನಹಳ್ಳಿ ಮಂಜುನಾಥ್ )ಬಣದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ, ತಹಶಿಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ತಾಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ರಾಜ್ಯ ರೈತ ಸಂಘ (ಹುಚ್ಚವ್ವನಹಳ್ಳಿ ಮಂಜುನಾಥ್) ಬಣದ ನೇತೃತ್ವದಲ್ಲಿ ರೈತರು ಜಗಳೂರಲ್ಲಿ ಪ್ರತಿಭಟನೆ ನಡೆಸಿದರು.

- ಅರಣ್ಯ ಇಲಾಖೆ ವಿರುದ್ಧ ಗೌಡಗೊಂಡನಹಳ್ಳಿ ರೈತರ ಪ್ರತಿಭಟನೆಯಲ್ಲಿ ಮಂಜುನಾಥ್‌ ಆಗ್ರಹ

- - - ಕನ್ನಡಪ್ರಭ ವಾರ್ತೆ ಜಗಳೂರು

ತಾಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ರಾಜ್ಯ ರೈತ ಸಂಘ (ಹುಚ್ಚವ್ವನಹಳ್ಳಿ ಮಂಜುನಾಥ್ )ಬಣದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಗೌಡಗೊಂಡನಹಳ್ಳಿ ಗ್ರಾಮದಿಂದ ಶನಿವಾರ ಪಾದಯಾತ್ರೆ ಹೊರಟ ಪ್ರತಿಭಟನಾಕಾರರು, ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಅಂಬೇಡ್ಕರ್ ವೃತ್ತದ ಮೂಲಕ ತಹಸೀಲ್ದಾರ್ ಕಚೇರಿ ಎದುರು ಮುಖ್ಯ ರಸ್ತೆಯಲ್ಲಿ ಕುಳಿತು ಬೃಹತ್ ಧರಣಿ ನಡೆಸಿದರು. ಅನಂತರ ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ಗೌಡಗೊಂಡನಹಳ್ಳಿ ಸಮೀಪದಲ್ಲಿನ 83.62 ವಿಸ್ತೀರ್ಣ ಪ್ರದೇಶದ ಪೈಕಿ 11.40 ಹೆಕ್ಟೇರ್‌ ಪ್ರದೇಶದಲ್ಲಿ 18 ಜನ ಪರಿಶಿಷ್ಟ ಪಂಗಡ, 2 ಜನ ಒಬಿಸಿ ಜನಾಂಗದವರಿಂದ ಒತ್ತುವರಿ ಕುರಿತು ಅರಣ್ಯ ಅಧಿಕಾರಿಗಳು ತೆರವುಗೊಳಿಸಲು ಹೊರಟಿರುವುದು ಕಾನೂನು ಉಲ್ಲಂಘನೆಯಾಗಿದೆ. ಈ ಕುರಿತು ಪಿಸಿಎಫ್ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿದೆ. ರೈತಪರ ಇತ್ಯರ್ಥವಾಗುವ ಅಗತ್ಯ ಸಾಕ್ಷ್ಯಾಧಾರಗಳನ್ನು ಸಲ್ಲಿಸಲಾಗಿದೆ ಎಂದರು.

ಕೂಡಲೇ ಅರಣ್ಯ ಪ್ರದೇಶದಲ್ಲಿನ ರೈತರ ಜಮೀನಿನಲ್ಲಿ ನೆಡುತೋಪು ನಿರ್ಮಿಸಲು ನೀಡಿರುವ ಅರ್ಜಿಗಳನ್ನು ಹಿಂಪಡೆಯಬೇಕು. ಯಥಾಪ್ರಕಾರ ಸರ್ಕಾರದಲ್ಲಿಟ್ಟುಕೊಂಡು ಅರ್ಜಿ ಸಲ್ಲಿಸಿದ ರೈತರ ಅರ್ಜಿಗಳನ್ನು ವಿಲೇವಾರಿಗೊಳಿಸಿ, ಹಕ್ಕುಪತ್ರ ವಿತರಿಸಬೇಕು. ಇಲ್ಲವಾದರೆ ಜ.24ರಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಮ್ಮುಖ ಅರಣ್ಯ ಹಕ್ಕುಕಾಯ್ದೆ ಮೇಲುಸ್ತುವಾರಿ ಸಮಿತಿ ಸಭೆ ಕರೆದಿದ್ದು, ಅವರ ಬಳಿ ನಿಯೋಗ ತೆರಳಿ ನಾವೂ ಮನವಿ ಸಲ್ಲಿಸುತ್ತೇವೆ. ಅಲ್ಲಿಯೂ ನ್ಯಾಯ ಸಿಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಮನವಿ ಸ್ವೀಕರಿಸಿದರು. ಅರಣ್ಯ ಅಧಿಕಾರಿ ಶ್ರೀನಿವಾಸ್, ರೈತ ಸಂಘಟನೆ ಮುಖಂಡರಾದ ಆಲೂರು ಪರುಶರಾಮ್ ಎಲೋದಹಳ್ಳಿ ರವಿ, ಗಂಡುಗಲಿ, ದೇವರಮನಿ ಮಹೇಶ್, ಚಿರಂಜೀವಿ ಸಿಎಂ ಹೊಳೆ, ರಾಜು ರಾಜನಹಟ್ಟಿ, ಗೌಡಗೊಂಡನಹಳ್ಳಿ ಸತೀಶ್, ಲೋಕೇಶ್, ಕಾನನಕಟ್ಟೆ ತಿಪ್ಪೇಸ್ವಾಮಿ, ಮಾರಪ್ಪ, ನೂರಾರು ರೈತರು ಭಾಗವಹಿಸಿದ್ದರು.

- - - -20ಜೆ.ಜಿ.ಎಲ್3:

ಜಗಳೂರು ತಾಲೂಕಿನ ಗೌಡಗೊಂಡನಹಳ್ಳಿ ರೈತರು ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲು ಗಾಲಿ ಕಾರ್ಖಾನೆ ಉದ್ಯೋಗಿಗೆಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್
ಡಿ.23ಕ್ಕೆ ರೈತರ ದಿನಾಚರಣೆ, ರಾಜ್ಯಮಟ್ಟದ ಸಮಾವೇಶ