ಜನೌಷಧ ಕೇಂದ್ರ ಮುಚ್ಚುವ ನಿರ್ಧಾರ ಕೈಬಿಡಲು ಬಿಜೆಪಿ ಒತ್ತಾಯ

KannadaprabhaNewsNetwork |  
Published : May 31, 2025, 01:26 AM ISTUpdated : May 31, 2025, 01:27 AM IST
30ಎಚ್‌ಪಿಟಿ1- ಹೊಸಪೇಟೆಯ ಉಪವಿಭಾಗ ಮಟ್ಟದ ಸರ್ಕಾರಿ ಆಸ್ಪತ್ರೆ ಎದುರು ಶುಕ್ರವಾರ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ಹೊರಡಿಸಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಉಪವಿಭಾಗ ಮಟ್ಟದ ಸರ್ಕಾರಿ ಆಸ್ಪತ್ರೆ ಎದುರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ಹೊಸಪೇಟೆ: ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ಹೊರಡಿಸಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಉಪವಿಭಾಗ ಮಟ್ಟದ ಸರ್ಕಾರಿ ಆಸ್ಪತ್ರೆ ಎದುರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

ವಿಜಯನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ ಮಾತನಾಡಿ, ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ಜನೌಷಧಿ ಮಳಿಗೆ ಮುಚ್ಚಲು ಆದೇಶ ಹೊರಡಿಸಿದೆ. ಸರ್ಕಾರದ ದುರುದ್ದೇಶದಿಂದ ಜನೌಷಧಿ ಮಳಿಗೆ ಮುಚ್ಚುತ್ತಿದೆ. ಈ ಕೇಂದ್ರಗಳಲ್ಲಿ ಬಡವರಿಗೆ ಕೈಗೆಟುಕುವ ದರದಲ್ಲಿ ಔಷಧಿಗಳು ದೊರೆಯುತ್ತಿದ್ದವು. ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲ ಬಡವರೇ ಆಗಿದ್ದಾರೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಈಗ ಬಡ ಜನರಿಗೆ ಅನುಕೂಲ ಆಗುವ ಯೋಜನೆಗೂ ತಿಲಾಂಜಲಿ ಇಡುತ್ತಿದೆ. ಇದರ ಹಿಂದೆ ಮೆಡಿಕಲ್ ಮಾಫಿಯಾ ಹುನ್ನಾರ ಇದೆ. ಕೂಡಲೇ ಆದೇಶ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ಬಡವರಿಗೆ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತಿದ್ದವು. ಈಗ ಸರ್ಕಾರ ಈ ಕೇಂದ್ರಗಳನ್ನು ಮುಚ್ಚುವುದರಿಂದ ದುಬಾರಿ ಹಣ ನೀಡಿ ಔಷಧಿ ಖರೀದಿಸಬೇಕಾಗಿದೆ. ಮೆಡಿಕಲ್‌ ಮಾಫಿಯಾಕ್ಕೆ ಅವಕಾಶ ನೀಡದೇ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಮುಂದುವರಿಸಬೇಕು. ಇದರಿಂದ ಆಸ್ಪತ್ರೆಗಳಿಗೆ ಬರುವ ಲಕ್ಷಾಂತರ ಜನರಿಗೆ ಅನುಕೂಲ ಆಗಲಿದೆ. ರಾಜ್ಯದಲ್ಲಿ ನಿತ್ಯ 5ರಿಂದ 6 ಲಕ್ಷ ಜನರಿಗೆ ಈ ಔಷಧಿಗಳಿಂದ ಅನುಕೂಲ ಆಗುತ್ತಿತ್ತು. ಗಂಭೀರ ಕಾಯಿಲೆಗಳಿಗೂ ಕೈಗೆಟಕುವ ದರದಲ್ಲಿ ಔಷಧಿ ದೊರೆಯುತ್ತಿತ್ತು. ಹಾಗಾಗಿ ಈ ಕೇಂದ್ರಗಳನ್ನು ಮರಳಿ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಗರಸಭೆ ಅಧ್ಯಕ್ಷ ರೂಪೇಶ್‌ಕುಮಾರ, ಮುಖಂಡರಾದ ಅಯ್ಯಾಳಿ ತಿಮ್ಮಪ್ಪ, ಅಶೋಕ ಜೀರೆ, ಶಂಕರ ಮೇಟಿ, ಕೆ.ಎಸ್. ರಾಘವೇಂದ್ರ, ಕಿಚಿಡಿ ಕೊಟ್ರೇಶ್, ಸಾಲಿ ಸಿದ್ದಯ್ಯ ಸ್ವಾಮಿ, ರೇವಣಸಿದ್ದಪ್ಪ, ವಿಜಯೇಂದ್ರ, ಚಂದ್ರು ದೇವಲಾಪುರ, ಹೊನ್ನೂರಪ್ಪ ಸತ್ಯನಾರಾಯಣ, ಗೌಳಿ ಬಸವರಾಜ, ರಾಜಶೇಖರ, ಉಮಾದೇವಿ, ಅನುರಾಧಾ, ಪೂರ್ಣಿಮಾ, ಶ್ರೀಲತಾ ಮತ್ತಿತರರಿದ್ದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ