ಅಭಿನವ ಶ್ರೀಗಳ ಸಮಾಜಮುಖಿ ಕಾರ್ಯ ಪ್ರಶಂಸನೀಯ: ಜಯಶಾಂತಲಿಂಗ ಸ್ವಾಮೀಜಿ

KannadaprabhaNewsNetwork |  
Published : Oct 01, 2024, 01:38 AM IST
ಚಿತ್ರ 29ಬಿಡಿಆರ್58 | Kannada Prabha

ಸಾರಾಂಶ

ಬಸವಕಲ್ಯಾಣದ ಗವಿಮಠದಲ್ಲಿ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರ 19ನೇ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ ಹಾಗೂ 38ನೇ ಜನ್ಮದಿನ ನಿಮಿತ್ತ ಧರ್ಮ ಸಮಾರಂಭ ಜರುಗಿತು.

ಕನ್ನಡಪ್ರಭ ವಾರ್ತೆ ಬಸವಕಲ್ಯಾಣ

ಗವಿಮಠದ ಪ್ರಗತಿ ಜೊತೆಗೆ ಆರೋಗ್ಯ ಪೂರ್ಣ ಸಮಾಜಕ್ಕಾಗಿ ಯುವ ಜನರನ್ನು ಜಾಗೃತಿಗೊಳಿಸುವ ಅಭಿನವ ಶ್ರೀಗಳ ಸಮಾಜಮುಖಿ ಕಾರ್ಯ ಪ್ರಶಂಸನಾರ್ಹ ಎಂದು ಹಿರೇನಾಗಾಂವದ ಜಯಶಾಂತಲಿಂಗ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗವಿಮಠದಲ್ಲಿ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರ 19ನೇ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ ಹಾಗೂ 38ನೇ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, 14ನೇ ವಯಸ್ಸಿನಲ್ಲಿಯೇ ಅಭಿನವ ಶ್ರೀಗಳ ಪಟ್ಟಾಧಿಕಾರ ಜರುಗಿದಾಗ ಮಠದಲ್ಲಿ ಏನೂ ಇರಲಿಲ್ಲ. ಈಗ ಸಾಕಷ್ಟು ಪ್ರಗತಿಯಾಗಿದೆ. ಘಟದಿಂದ ಮಠವಾಗಿ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ನೇತೃತ್ವ ವಹಿಸಿದ ಗವಿ ಮಠದ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಮಾತನಾಡಿ, ಭಕ್ತರ ಕಲ್ಯಾಣವೇ ಗುರುಗಳ ಆಶಯವಾಗಿರುತ್ತದೆ. ಗುರು ತೋರುವ ಮಾರ್ಗದಲ್ಲಿ ಭಕ್ತರು ಜೀವನ ಸಾಗಿಸಿದಾಗ ಶಾಂತಿ, ನೆಮ್ಮದಿ, ಪ್ರಗತಿ ಕಾಣಲು ಸಾಧ್ಯ ಎಂದು ಹೇಳಿದರು. ಶಾಸಕ ಶರಣು ಸಲಗರ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿವರ್ಷ ಜನ್ಮದಿನೋತ್ಸವ ನಿಮಿತ್ತ ಪಾದಯಾತ್ರೆ ನಡೆಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿರುವ ಅಭಿನವ ಶ್ರೀಗಳ ಸಮಾಜಪರ ಕಾಳಜಿ ಮಹತ್ವದ್ದು ಎಂದರು.

ಸಾಹಿತಿ ವೀರಶೆಟ್ಟಿ ಪಾಟೀಲ್ ಸಂಪಾದಿತ ಕವನ ಸಂಕಲನ, ಅಭಿನವ ಶ್ರೀಗಳ ಮೊಬೈಲ್ ಜಾಗೃತಿ ಪಾದಯಾತ್ರೆ ಗ್ರಂಥ ಲೋಕಾರ್ಪಣೆಗೊಳಿಸಿದ ಸಂಸದ ಸಾಗರ್ ಖಂಡ್ರೆ ಮಾತನಾಡಿ, ಸಮಾಜದ ಹಿತದೃಷ್ಟಿಯಿಂದ ಜನರಲ್ಲಿ ಜಾಗೃತಿ ಮೂಡಿಸುವ ಅಭಿನವ ಶ್ರೀಗಳ ಕಾರ್ಯಕ್ಕೆ ಬೆಂಬಲಿಸುವ ಮೂಲಕ ಎಲ್ಲರೂ ಕೈಜೋಡಿಸಬೇಕು ಎಂದು ಕೋರಿದರು.

ಜಹೀರಾಬಾದ್‌ನ ವೀರೇಶ್ವರ ಶಿವಾಚಾರ್ಯ ಆಶೀರ್ವಚನ ನೀಡಿದರು. ಮಾಜಿ ಎಂಎಲ್ಸಿ ವಿಜಯಸಿಂಗ್, ಕಾಂಗ್ರೆಸ್ ಮುಖಂಡ ಧನರಾಜ ತಾಳಂಪಳ್ಳಿ, ಹಿರಿಯ ಚಿತ್ರನಟಿ ಡಾ.ಪಂಕಜ ವೆಂಕಟರಮಣ, ಡಾ.ಸಂಜೀವಕುಮಾರ ಅತಿವಾಳ ಮಾತನಾಡಿದರು. ಎಂಎಲ್‌ಸಿ ಎಂ.ಜಿ. ಮೂಳೆ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ, ಪ್ರಮುಖರಾದ ಬಾಬು ಹೊನ್ನಾನಾಯಕ, ನೀಲಕಂಠ ರಾಠೋಡ್, ಅರ್ಜನ ಕನಕ, ಮನೋಹರ ಮೈಸೆ, ಶಾಂತಲಿಗ ಮಠಪತಿ, ಜ್ಞಾನೇಶ್ವರ ಮೂಳೆ, ರಾಜಶೇಖರ ಸಾಹು ಸೀರಿ, ಶರಣಪ್ಪ ಜಿ.ಬಿರಾದಾರ, ಶಿವಲಿಂಗಯ್ಯ ಕನ್ನಾಡ, ಸಿದ್ದಪ್ಪ ಉಳ್ಳ ವೀರಶೆಟ್ಟಿ ಪಾಟೀಲ್, ಸಿದ್ದು ಬಿರಾದಾರ, ಶ್ರೀನಿವಾಸ ಪಾಟೀಲ್ ಇತರರಿದ್ದರು.

ರಮೇಶ ರಾಜೋಳ ಸ್ವಾಗತಿಸಿದರು. ಮಲ್ಲಿಕಾರ್ಜುನ ಆಲಗೂಡ ನಿರೂಪಣೆ ಮಾಡಿದರು. ವಿವಿಧೆಡೆಯಿಂದ ಆಗಮಿಸಿದ ಮಠದ ಭಕ್ತರು ಡಾ.ಅಭಿನವ ಶ್ರೀಗಳನ್ನು ಸತ್ಕರಿಸಿ ಆಶೀರ್ವಾದ ಪಡೆದರು. ರವಿ ನಾವದಗೇಕರ, ಶ್ರೀಶೈಲ ವಾತಡ, ಶಿವಕುಮಾರ ಬಿರಾದಾರ, ಲೋಕೇಶ ಮೋಳಕೆರೆ, ಸಂಜುಕುಮಾರ ಜಾಧವ್, ಶ್ರೀನಿವಾಸ ಬಿರಾದಾರ ಅವರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌