ಶಕ್ತಿ ದೇವತೆ ದೇಗುಲಗಳಲ್ಲಿ ಅಭಿಷೇಕ, ಅಲಂಕಾರ, ವಿಶೇಷ ಪೂಜೆ

KannadaprabhaNewsNetwork |  
Published : Oct 13, 2024, 01:05 AM IST
೧೨ಕೆಎಂಎನ್‌ಡಿ-೩ಮಂಡ್ಯದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ನೆರೆದಿದ್ದ ಭಕ್ತರ ದಂಡು. | Kannada Prabha

ಸಾರಾಂಶ

ಆಯುಧ ಪೂಜೆ ಅಂಗವಾಗಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಹಬ್ಬದ ಪ್ರಯುಕ್ತ ಜನರು ತಮ್ಮ ವಾಹನಗಳು, ಅಂಗಡಿ ಮುಂಗಟ್ಟುಗಳಲ್ಲಿ ವಿಶೇಷ ಪೂಜೆ ಏರ್ಪಡಿಸಿ ಪರಸ್ಪರರು ಸಿಹಿ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಆಯುಧಪೂಜೆ ಮತ್ತು ವಿಜಯದಶಮಿಯನ್ನು ಸಾರ್ವಜನಿಕರು ಶ್ರದ್ಧಾ- ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಿದರು.

ಆಯುಧ ಪೂಜೆ ಅಂಗವಾಗಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಹಬ್ಬದ ಪ್ರಯುಕ್ತ ಜನರು ತಮ್ಮ ವಾಹನಗಳು, ಅಂಗಡಿ ಮುಂಗಟ್ಟುಗಳಲ್ಲಿ ವಿಶೇಷ ಪೂಜೆ ಏರ್ಪಡಿಸಿ ಪರಸ್ಪರರು ಸಿಹಿ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.

ನವರಾತ್ರಿ ಕೊನೆಯ ದಿನ ವಿಜಯದಶಮಿಯಂದು ಜಿಲ್ಲೆಯ ಶಕ್ತಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಬೆಳಗಿನಿಂದಲೇ ದೇವಾಲಯಗಳಲ್ಲಿ ದೇವರಿಗೆ ಅಭಿಷೇಕ, ಅಲಂಕಾರ, ವಿಶೇಷ ಪೂಜೆ, ಹೋಮ- ಹವನಗಳು ನಡೆದವು. ನಗರದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಾಲಯ, ಶ್ರೀ ಚಾಮುಂಡೇಶ್ವರಿ ದೇವಾಲಯ, ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯ, ಶ್ರೀ ಗಂಗಾಧರೇಶ್ವರ ಸ್ವಾಮಿ ದೇಗುಲ ಸೇರಿದಂತೆ ನಗರದ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಯಿತು. ನಂತರ ಬನ್ನಿ ಮರಕ್ಕೆ ಪೂಜೆ ಸಲ್ಲಿಸಲಾಯಿತು. ಬಳಿಕ ದೇವಳಕ್ಕೆ ಆಗಮಿಸಿದ್ದ ಭಕ್ತರಿಗೆ ಬನ್ನಿ ಪತ್ರೆಗಳನ್ನು ಪ್ರಸಾದದ ರೂಪದಲ್ಲಿ ವಿತರಿಸಲಾಯಿತು. ಸಾರ್ವಜನಿಕರು ದೇವರ ದರ್ಶನ ಪಡೆದು ಪುನೀತರಾದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಭಿವೃದ್ಧಿ ಶೂನ್ಯ ದಕ್ಷಿಣದಲ್ಲಿ ಬಿಜೆಪಿ ಗೆಲ್ಲುತ್ತೆ: ರಘು ಕೌಟಿಲ್ಯ
ಜಗಜೀವನ್ ರಾಂ, ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ: ಜಿಲ್ಲಾಧಿಕಾರಿ ಟಿ.ವೆಂಕಟೇಶ್