ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಕೊಣನೂರಿನ ಇದ್ರೀಸ್ ಎಂಬಾತ ಸೋಮವಾರಪೇಟೆ ತೋಟಗಾರಿಕೆ ಇಲಾಖೆಯ ಸಮೀಪ ಕಡಿಮೆ ಬೆಲೆಗೆ ಅನ್ನಭಾಗ್ಯ ಅಕ್ಕಿಯನ್ನು ಖರೀದಿಸಿ ಬೇರೆ ಕಡೆಗೆ ಸಾಗಿಸುವ ದಂದೆಯಲ್ಲಿ ತೊಡಗಿದ್ದ ಸಂದರ್ಭ ಈ ದಾಳಿ ನಡೆದಿದೆ. ಲಾರಿ ಸಮೇತ ಈತನಿಂದ 1,42,970 ರು.. ಮೌಲ್ಯದ 4200 ಕೆ.ಜಿ. ಅಕ್ಕಿ ವಶ ಪಡಿಸಿಕೊಳ್ಳಲಾಗಿದೆ.
ಈತನಿಗೆ ಅನ್ನಭಾಗ್ಯ ಅಕ್ಕಿಯನ್ನು ಮಾರಾಟ ಮಾಡಿದವರಿಗೆ ಏನು ಶಿಕ್ಷೆ ಎಂಬುದನ್ನು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಹಣ ನೀಡಿ ಅಕ್ಕಿ ಪಡೆದುಕೊಂಡು ಬೇರೆಡೆಗೆ ಸಾಗಿಸಿದವನನ್ನು ವಶಕ್ಕೆ ಪಡೆಯಲಾಗಿದೆ ಆದರೆ ಆತನಿಗೆ ಅಕ್ಕಿ ನೀಡಿದವರಿಗೂ ಕೂಡ ಶಿಕ್ಷೆ ಆಗಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.