ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಕೆಲವು ಸಾರ್ವಜನಿಕರು ಪೌರ ಕಾರ್ಮಿಕರಿಗೆ ನಿಂದಿಸುತ್ತಿದ್ದು, ಅಂತಹವರು ಇನ್ನಾದರೂ ತಮ್ಮ ವರ್ತನೆ ತಿದ್ದಿಕೊಳ್ಳಬೇಕು ಎಂದರು.
ಪೌರ ಕಾರ್ಮಿಕರು ನಿರ್ಭೀತಿಯಿಂದ ಕೆಲಸ ಮಾಡಬೇಕು. ಸಾರ್ವಜನಿಕರಿಂದ ಪೌರ ಕಾರ್ಮಿಕರಿಗೇನಾದರೂ ತೊಂದರೆಯಾದರೆ ತಕ್ಷಣವೇ ನನ್ನ ಗಮನಕ್ಕೆ ತನ್ನಿ. ನೀವು ನಿರ್ಭೀತಿಯಂದ ಕೆಲಸ ಮಾಡಬೇಕು. ಸಾರ್ವಜನಿಕರು, ಅಧಿಕಾರಿಗಳಿಂದ ತೊಂದರೆಯಾದರೆ ನನ್ನ ಗಮನಕ್ಕೆ ತಂದರೆ, ತಕ್ಷಣ ಅದನ್ನು ಪರಿಹರಿಸುತ್ತೇವೆ ಎಂದು ಭರವಸೆ ನೀಡಿದರು.ಬೆಳಿಗ್ಗೆ ತಿಂಡಿ ತಿಂದ ನಂತರ ಕೈತೊಳೆಯಲು ಸಹ ಪೌರ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಇಲ್ಲ. ಹಲವಾರು ಸಮಸ್ಯೆಗಳು ಪೌರ ಕಾರ್ಮಿಕರಿಗೂ ಇವೆ. ವಾರದಲ್ಲಿ ಮೂರು ದಿನ ವಿವಿಧ ಕಡೆಗೆ ನಾವೇ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸುತ್ತಿದ್ದೇವೆ. ಪೌರ ಕಾರ್ಮಿಕರ ಸಮಸ್ಯೆ ಪರಿಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಬಳಿ ಚರ್ಚಿಸಿದ್ದೇವೆ ಎಂದು ತಿಳಿಸಿದರು.
ಪಾಲಿಕೆ ಆಯುಕ್ತೆ ರೇಣುಕಾ, ಉಪ ಆಯುಕ್ತೆ ಮಂಜುಳಾ, ಮುಖ್ಯ ಲೆಕ್ಕಾಧಿಕಾರಿ ಡಿ.ಪ್ರಿಯಾಂಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ, ಎಸ್ಇ ಚೌಹಾಣ್, ಇಇ ಉದಯಕುಮಾರ, ಪರಿಸರ ಅಭಿಯಂತರರಾದ ಬಸವಣ್ಣ, ಶ್ರೀನಿವಾಸ, ಪೌರ ನೌಕರರ ಸಂಘದ ಅಧ್ಯಕ್ಷ ಕೆ.ಎಸ್.ಗೋವಿಂದರಾಜ, ಎಸ್.ಕೆ.ಪಾಂಡುರಾಜ, ನಾಗರಾಜ, ಪೌರ ಕಾರ್ಮಿಕರ ಸಂಘಟನೆಗಳ ರಾಜ್ಯ ಮುಖಂಡರಾದ ಎಲ್.ಎಂ.ಹನುಮಂತಪ್ಪ, ಜಿಲ್ಲಾ ಮುಖಂಡರಾದ ಎನ್.ನೀಲಗಿರಿಯಪ್ಪ, ಎಲ್.ಡಿ.ಗೋಣೆಪ್ಪ, ಎಲ್.ಎಂ.ಎಚ್.ಸಾಗರ್, ಮಲ್ಲಿಕಾ ಗುಡಿಕೋಟೆ, ಸುನಿಲ್ಕಮಾರ, ರಾಘವೇಂದ್ರ, ಸಿ.ಎಂ.ಸಚಿನಕುಮಾರ, ಮದನ್ ಕುಮಾರ, ಮಾರುತಿ ಇತರರು ಇದ್ದರು. ಇದೇ ವೇಳೆ ಪೌರ ಕಾರ್ಮಿಕರಿಗೆ ಸನ್ಮಾನಿಸಲಾಯಿತು.
ಜಿ.ಎಂ.ಗಂಗಾಧರಸ್ವಾಮಿ ಜಿಲ್ಲಾಧಿಕಾರಿ.