ಬೋಧಕೇತರ ಸಿಬ್ಬಂದಿಗೆ ನಿಂದನೆ: ಕವಿವಿ ನೌಕರರ ಪ್ರತಿಭಟನೆ

KannadaprabhaNewsNetwork |  
Published : Mar 07, 2026, 12:45 AM IST
ಕರ್ನಾಟಕ ವಿಶ್ವವಿದ್ಯಾಲಯ | Kannada Prabha

ಸಾರಾಂಶ

ಕವಿವಿ ಆಡಳಿತ ಕಚೇರಿ ಎದುರು ಜಮಾಯಿಸಿದ ಸಿಬ್ಬಂದಿ, ಪರಿಶಿಷ್ಟ ಪಂಗಡದ ನೌಕರರನ್ನು ಅವಾಚ್ಯವಾಗಿ ನಿಂದಿಸಿದ ಆರೋಪ ಹೊತ್ತ ಸಿಂಡಿಕೇಟ್ ಸದಸ್ಯ ಶ್ಯಾಮ್ ಮಲ್ಲನಗೌಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ:

ಕರ್ನಾಟಕ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಸದಸ್ಯರೊಬ್ಬರು ವಿವಿ ನೌಕರರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕವಿವಿ ಪರಿಶಿಷ್ಟ ಪಂಗಡಗಳ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕವಿವಿ ಆಡಳಿತ ಕಚೇರಿ ಎದುರು ಜಮಾಯಿಸಿದ ಸಿಬ್ಬಂದಿ, ಪರಿಶಿಷ್ಟ ಪಂಗಡದ ನೌಕರರನ್ನು ಅವಾಚ್ಯವಾಗಿ ನಿಂದಿಸಿದ ಆರೋಪ ಹೊತ್ತ ಸಿಂಡಿಕೇಟ್ ಸದಸ್ಯ ಶ್ಯಾಮ್ ಮಲ್ಲನಗೌಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಏಟು ಕೊಟ್ಟು ನೌಕರರನ್ನು ಹೊರಹಾಕಬೇಕು ಎಂದು ಸದಸ್ಯರು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.ಗುರುವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಬೋಧಕೇತರ ಸಿಬ್ಬಂದಿಯ ಕುರಿತು ಚರ್ಚೆ ನಡೆದಿತ್ತು. ಆಗ ಸದಸ್ಯ ಶ್ಯಾಮ ಮಲ್ಲನಗೌಡರ ಬೋಧಕೇತರ ಸಿಬ್ಬಂದಿಗೆ ''''''''ಏಟು ಕೊಟ್ಟು'''''''' ಹೊರಹಾಕಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ವಿಷಯ ಬಹಿರಂಗಗೊಳ್ಳುತ್ತಿದ್ದಂತೆಯೇ ಕವಿವಿ ನೌಕರರು ಪ್ರತಿಭಟನೆಯ ಹಾದಿ ಹಿಡಿದರು. ಬೋಧಕೇತರ ಸಿಬ್ಬಂದಿ ಯಾವುದೇ ಫಲಾಪೇಕ್ಷೆ ಇಲ್ಲದೇ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ ಈ ರೀತಿ ಮಾತನಾಡುವುದು ಸರಿಯಲ್ಲ. ಇದು ಸದಸ್ಯ ಸ್ಥಾನಕ್ಕೆ ಗೌರವ ಕೂಡ ತರುವುದಲ್ಲ ಎಂದು ಕಿಡಿಕಾರಿದರು.ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕವಿವಿ ಉಳಿಸಿ ಎಂಬ ಘೋಷಣೆ ಕೂಡ ಕೂಗಿದರು. ಕೂಡಲೇ ಸಿಂಡಿಕೇಟ್ ಸದಸ್ಯರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಸ್ಥಳಕ್ಕೆ ಕುಲಪತಿ ಡಾ. ಎ.ಎಂ. ಖಾನ್, ಕುಲಸಚಿವ ಶಂಕರ ವಣಕ್ಯಾಳ ಬಂದು ಮಾತುಕತೆ ನಡೆಸಿದರಾದರೂ ಪ್ರಯೋಜನವಾಗಲಿಲಲ್ಲ. ಕೊನೆಗೆ ಸಿಂಡಿಕೇಟ್ ಸದಸ್ಯ ಶ್ಯಾಮ ಮಲ್ಲನಗೌಡರ ಪ್ರತಿಭಟನಾ ಸ್ಥಳಕ್ಕೆ ಬಂದು ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು ಎಂದು ನೌಕರರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಬಳ್ಳಾರಿಯ ಅನಿರುದ್ಧ ಕಟ್ಟಿಮನಿಗೆ 786ನೇ ರ‍್ಯಾಂಕ್‌
ಅವೈಜ್ಞಾನಿಕವಾಗಿ ಸೇರಿಸಿರುವ ಅರಣ್ಯ ಪ್ರದೇಶ ರದ್ದುಗೊಳಿಸಿ ಪುನಃ ಸರ್ವೆಗೆ ರೈತ ಸಂಘ ವಿನಂತಿ