ಕನ್ನಡಪ್ರಭ ವಾರ್ತೆ ಉಡುಪಿ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಸಂಚಾಲಕ ಅಜಿತ್ ಜೋಗಿ, ರಾಜ್ಯ ಸರ್ಕಾರವು ತನ್ನ ಗ್ಯಾರಂಟಿ ಪಟ್ಟಿಯಲ್ಲಿ ವಿದ್ಯಾರ್ಥಿ ವೇತನವನ್ನು ಸೇರಿಸದೇ ಅಸಡ್ಡೆ ಮಾಡುತ್ತಿದೆ. ಈ ಅಸಡ್ಡೆಯನ್ನು ಬಿಟ್ಟು ತಕ್ಷಣ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.
ನಗರ ಕಾರ್ಯದರ್ಶಿ ಶ್ರೀವತ್ಸ, ರಾಜ್ಯ ಸರ್ಕಾರ 4 ಲಕ್ಷ ಬಡ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿದ್ದ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುತ್ತಿದೆ ಎಂದು ತೀವ್ರ ಅಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಪರಿಷತ್ನ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸಂಹಿತಾ ಕೆ., ನಗರ ಖೇಲೋ ಭಾರತ್ ಪ್ರಮುಖ್ ಸ್ವಸ್ತಿಕ್, ನಗರ ಸಂಪರ್ಕ ಪ್ರಮುಖ್ ರವಿಚಂದ್ರ ಮತ್ತು ಕಾರ್ಯಕರ್ತರಾದ ಕಿಶೋರ್, ನವೀನ್, ಹರ್ಷೇಂದ್ರ, ವರುಣ್, ಪ್ರಷ್ಮಾ, ಮಂಗಳಗೌರಿ, ಕೃತಿ ಮುಂತಾದವರು ಭಾಗವಹಿಸಿದ್ದರು.