ಕನ್ನಡಪ್ರಭ ವಾರ್ತೆ ಕಲಬುರಗಿ
ಈ ಸಂದರ್ಭದಲ್ಲಿ ಎಬಿವಿಪಿಯ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಹನುಮಂತ ಬಗಲಿ ಮಾತನಾಡಿ,
ದೇಶದಲ್ಲಿ ಭಾರತದ ಶಿಕ್ಷಣ ನೀತಿ ಜಾರಿಗೆ ಬರಬೇಕು. ಮಕ್ಕಳು ಬ್ರಿಟಿಷ್ ಶಿಕ್ಷಣ ನೀತಿಯಿಂದ ಮುಕ್ತರಾಗಿ ಭಾರತೀಯ ಶಿಕ್ಷಣವನ್ನ ಪಡೆಯಬೇಕು ಎಂಬ ಉದ್ದೇಶದಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಸರ್ಕಾರ ಜಾರಿಗೆ ತಂದಿದ್ದು ಅದನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ರಾಜ್ಯ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ ಇಂದಿನ ರಾಜ್ಯ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಹಿಂಪಡೆಯುತ್ತೇವೆ ಎಂದು ಹೇಳಿದ್ದು, ಸರ್ಕಾರದ ನಡೆಯನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದರು.ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಂದೇ ರೀತಿಯ ಶಿಕ್ಷಣ ಪದ್ಧತಿ ಇರಬೇಕು. ಆ ಶಿಕ್ಷಣ ಪದ್ಧತಿ, ಭಾರತೀಯ ವಿದ್ಯಾರ್ಥಿಗಳಿಗೆ ಯೋಗ ಹಾಗೂ ಇನ್ನಿತರ ಕೌಶಲ್ಯವನ್ನು ನೀಡುವ ಉದ್ದೇಶ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶವಾಗಿದೆ. ಮುಂದಿನ 20-25 ವರ್ಷಗಳಲ್ಲಿ ಆಗಬಹುದಾದ ಬದಲಾವಣೆಯನ್ನು ಮುಂದಿಟ್ಟುಕೊಂಡು ಈ ನೀತಿಯನ್ನ ಹಲವಾರು ಶಿಕ್ಷಣ ತಜ್ಞರು ತಯಾರಿ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ರಾಷ್ಟ್ರೀಯತೆಯನ್ನ ತುಂಡು ಮಾಡಿ ಪ್ರತ್ಯೇಕತೆಯ ಹೆಜ್ಜೆಯನ್ನ ಇಡುತ್ತಿರುವ ನೀತಿ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತಿದೆ ಎಂದು ಬಗಲಿ ಹೇಳಿದರು.
ಒಂದು ವೇಳೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನೂ ರದ್ದು ಪಡಿಸಿದ್ದೆ ಆದಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಹೋರಾಟಗಾರರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.