ಕನ್ನಡಪ್ರಭ ವಾರ್ತೆ ಮಂಡ್ಯ
ಸ್ಥಳೀಯ ಬಸ್ಗಳ ಕೊರತೆ ಹೆಚ್ಚಾಗಿದೆ, ಹಲವು ಪ್ರಮುಖ ಮಾರ್ಗಗಳಲ್ಲಿ ನಿರಂತರ ಬಸ್ ಸೇವೆಯಿಲ್ಲದೇ ಪ್ರಯಾಣಿಸಲು ಅನಾನುಕೂಲವಾಗಿದೆ. ಸಮಯ ಫಲಕವನ್ನು ಅನುಸರಣೆ ಇಲ್ಲ, ಬಸ್ಗಳು ನಿಗದಿತ ಸಮಯದಲ್ಲಿ ಬರುವುದೇ ಇಲ್ಲವಾಗಿದೆ. ಇದರಿಂದ ಸಾರ್ವಜನಿಕರು ತಮ್ಮ ದಿನನಿತ್ಯ ಕೆಲಸಗಳಿಗೆ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೂತನ ಬಸ್ ಸೇವೆ ಅವಶ್ಯಕತೆ ಇದ್ದು, ಅಧಿಕಾರಿಗಳು ಇತ್ತ ಗಮನಹರಿಸಬೇಕು. ಪ್ರಯಾಣಿಕರ ಸಂಖ್ಯೆ ದಿನನಿತ್ಯ ಹೆಚ್ಚಾಗುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿಯಾದರೂ ಬಸ್ಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಸ್ವಚ್ಛತೆ ಮತ್ತು ನಿರ್ವಹಣೆ ಕೊರತೆಯು ಕೆಲವು ಬಸ್ಗಳಲ್ಲಿ ಕಂಡು ಬರುತ್ತಿದೆ, ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.ಸ್ಥಳೀಯ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ನಿಗದಿತ ಸಮಯಪಟ್ಟಿಯು ಪ್ರತಿ ಬಸ್ ನಿಲ್ದಾಣದಲ್ಲಿಯೂ ಪ್ರಕಟಿಸಬೇಕು. ಅದನ್ನು ಅಚ್ಚುಕಟ್ಟಾಗಿ ಅನುಸರಿಸಲು ಸೂಚನೆ ನೀಡಬೇಕು. ಹೊಸ ಬಸ್ಗಳನ್ನು ತುರ್ತಾಗಿ ಸಂಚರಿಸಲು ಅವಕಾಶ ನೀಡಬೇಕು. ಬಸ್ಗಳ ನಿರ್ವಹಣೆಗೆ ಹೆಚ್ಚು ಒತ್ತು ನೀಡಬೇಕು ಇಲ್ಲವಾದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.