ಕನ್ನಡಪ್ರಭ ವಾರ್ತೆ ಕಲಬುರಗಿ
ಈ ಸಂದರ್ಭದಲ್ಲಿ ಎಬಿವಿಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಹನುಮಂತ ಬಗಲಿ ಮಾತನಾಡಿ, ಎಲ್ಲ ಕ್ಷೇತ್ರಗಳಿಗೂ ಉತ್ತಮವಾದ, ವಿದ್ಯಾವಂತ, ಕೌಶಲ್ಯವುಳ್ಳ, ಹಾಗೂ ಪ್ರಾಮಾಣಿಕ ವ್ಯಕ್ತಿಗಳನ್ನು ನೀಡುವ ಕ್ಷೇತ್ರ ಶಿಕ್ಷಣ ಕ್ಷೇತ್ರ, ಮುಂದಿನ ಹತ್ತಾರು ವರ್ಷದ ರಾಜ್ಯ ಮತ್ತು ದೇಶದ ಅಭಿವೃದ್ಧಿ ಶಿಕ್ಷಣ ಕ್ಷೇತ್ರದ ಮೇಲೆ ನಿಂತಿರುತ್ತದೆ.
ಆ ಕ್ಷೇತ್ರಕ್ಕೆ ಎಲ್ಲ ಸೌಲಭ್ಯವನ್ನು ಕೊಡುವುದು ಸರ್ಕಾರಗಳ ಮೊದಲ ಆದ್ಯತೆಯಾಗಬೇಕು. ಆದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ನೀಡದೆ ಇರುವುದು, ಸಾರಿಗೆ ಬಸ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ವಿದ್ಯಾರ್ಥಿಗಳು ದಿನನಿತ್ಯ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.ಕಳೆದ ವರ್ಷದ ವಿದ್ಯಾರ್ಥಿ ವೇತನವು ವಿದ್ಯಾರ್ಥಿಗಳಿಗೆ ಸರಿಯಾಗಿ ಜಮೆಯಾಗದೆ ಇರುವುದು, ಶಾಲಾ ಕಾಲೇಜುಗಳು ಪ್ರಾರಂಭವಾದ ತಿಂಗಳ ನಂತರ ಹಾಸ್ಟೆಲ್ಗಳ ಅರ್ಜಿಯನ್ನು ಪ್ರಾರಂಭ ಮಾಡಿ, ಪ್ರವೇಶಾತಿ ಪ್ರಕ್ರಿಯೆ ಮುಗಿಯುವುದರೊಳಗೆ ಮೂರು ತಿಂಗಳುಗಳ ಕಾಲ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಿಗದಿರುವುದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ಗಳ ಸಂಖ್ಯೆ ಇರದಿರುವುದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಹಳಷ್ಟು ಬದಲಾವಣೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಸಚಿವರಾದ ನೀವು ಈ ಬಗ್ಗೆ ಗಮನಹರಿಸಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಎಬಿವಿಪಿ ಆಗ್ರಹಿಸಿತು.
೧) ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಗಳ ಸಂಖ್ಯೆ ಹೆಚ್ಚಳ ಮಾಡಬೇಕು.
೩) ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯದಲ್ಲಿ ಬಸ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು.
೫) ರಾಜ್ಯದ ಎಲ್ಲ ವಿವಿಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಸಮರ್ಪಕವಾಗಿ ಜಾರಿ ಮಾಡುವಂತೆ ಸೂಚಿಸಬೇಕು.
೭)ಹಾಸ್ಟೆಲ್ಗಳ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು ಹಾಗೂ ಹಾಸ್ಟೆಲ್ಗಳಿಗೆ ಸ್ವಂತ ಕಟ್ಟಡ ನೀಡಬೇಕು.