ರಾಣಿಬೆನ್ನೂರು: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಗುರುವಾರ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟಿಸಿ ಉಪತಹಸೀಲ್ದಾರ್ ಶಾಮ್ ಗೊರವರ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಅಭಿಷೇಕ ದೊಡ್ಡಮನಿ ಮಾತನಾಡಿ, ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಧರ್ಮ ವಿಚಾರಿಸಿ ಹತ್ಯೆ ಮಾಡಿರುವುದು ಖೇದಕರ ಸಂಗತಿ. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದು ಸಾರ್ವಕಾಲಿಕ ಸತ್ಯವಾಗಿದೆ. ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿ ಬದಲಾಯಿಸಲು ಹಾಗೂ ಜನಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿ ನೆಲೆಸುವಂತಾಗಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ.
ವಿಕೃತಿ ಮೆರೆದ ಉಗ್ರರಿಗೆ ತಕ್ಕ ಶಾಸ್ತಿಯಾಗಲಿ
ರಟ್ಟೀಹಳ್ಳಿ: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಹಾಗೂ ದಾಳಿಯಲ್ಲಿ ಮೃತರಾದ ಹಿಂದೂಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಾಲೂಕು ಬಿಜೆಪಿ ಕಾರ್ಯಕರ್ತರು ಹಳೇ ಬಸ್ ನಿಲ್ದಾಣ ಬಳಿ ಸರ್ಕಲ್ನಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದರು.ನಂತರ ಮಾತನಾಡಿದ ಬಿಜೆಪಿ ತಾಲೂಕಾಧ್ಯಕ್ಷ ದೇವರಾಜ ನಾಗಣ್ಣನವರ ಅವರು, ಆರ್ಟಿಕಲ್ 370 ವಿಧಿ ರದ್ದಾದ ನಂತರ ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಜನತೆ ಶಾಂತಿಯುತ ಜೀವನ ನಡೆಸುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನ ಪೋಷಿತ ಉಗ್ರರು ಅಮಾಯಕ ಹಿಂದೂಗಳನ್ನು ಕೊಂದು ವಿಕೃತಿ ಮೆರೆದಿದ್ದಾರೆ. ದಾಳಿಗೆ ತಕ್ಕ ಪ್ರತಿಕಾರವಾಗಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ದಾಳಿ ನಡೆದ ಸಂದರ್ಭದಲ್ಲಿ ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರ ನೆಲೆಗಳನ್ನು ಹೊಡೆದುರುಳಿಸಿದ 52 ಇಂಚಿನ ಎದೆಗಾರಿಕೆ ನರೇಂದ್ರ ಮೋದಿ ಹಾಗೂ ಭಾರತೀಯ ಸೈನ್ಯಕ್ಕಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬಿಜೆಪಿ ಮುಖಂಡ ಸಿದ್ದು ಸಾವಕ್ಕಳವರ ಮಾತನಾಡಿ, ಅಮಾಯಕ ಹಿಂದೂಗಳನ್ನು ಕೊಂದ ಪಾಕಿಸ್ತಾನದ ಉಗ್ರರಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮುಖಂಡರಾದ ಡಿ.ಎಂ. ಸಾಲಿ, ಶಂಭಣ್ಣ ಗೂಳಪ್ಪನವರ, ಸಂದೀಪ ಪಾಟೀಲ್, ಮನೋಜ ಗೊಣೆಪ್ಪನವರ, ಸುಶೀಲ್ ನಾಡಿಗೇರ, ವೀರನಗೌಡ ಎಡಚಿ, ಮಾಲತೇಶ ಬೆಳಕೆರಿ, ರವಿ ಮುದ್ದಣ್ಣನವರ, ಮಂಜು ತಳವಾರ, ರಾಜುಗೌಡ ಪಾಟೀಲ್, ಹನುಮಂತಪ್ಪ ಗಾಜೇರ, ಜೆ.ಪಿ. ಪ್ರಕಾಶ ಮುಂತಾದವರು ಇದ್ದರು.