ವಿದ್ಯಾರ್ಥಿಗಳ ಸಮಸ್ಯೆ ಸರಿಪಡಿಸುವಂತೆ ಎಬಿವಿಪಿ ಪ್ರತಿಭಟನೆ

KannadaprabhaNewsNetwork |  
Published : Jul 12, 2024, 01:36 AM IST
ಪೊಟೊ: 11ಎಸ್‌ಎಂಜಿಕೆಪಿ04ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಚೇರಿ ಎದುರು ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. | Kannada Prabha

ಸಾರಾಂಶ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಚೇರಿ ಎದುರು ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದ ಘಟನೆ ನಡೆಯಿತು.

ವಿದ್ಯಾರ್ಥಿಗಳ ಸಮಸ್ಯೆಗಳು ಸಾಕಷ್ಟಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದುವರೆಗೂ ಬಸ್ ಪಾಸ್ ಸಿಕ್ಕಿಲ್ಲ. ಅಲ್ಲದೆ ಬಸ್‌ಗಳ ಸಂಖ್ಯೆಯೂ ಕೂಡ ಕಡಿಮೆ ಇದೆ. ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆಯಲ್ಲಿ ವಿಳಂಬವಾಗುತ್ತಿದೆ. ವಿದ್ಯಾರ್ಥಿ ವೇತನವನ್ನು ನೀಡುತ್ತಿಲ್ಲ. ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಹಾಕಿ ಕಾಯುತ್ತಿದ್ದಾರೆ ಎಂದು ಪ್ರತಿಭಟನಕಾರರು ದೂರಿದರು.

ಈಗಾಗಲೇ ಕಾಲೇಜುಗಳು ಪ್ರಾರಂಭವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ರಾಜ್ಯದ ಹಾಸ್ಟೆಲ್‌ಗಳಲ್ಲಿ ಪ್ರವೇಶ ಪಡೆಯಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅತ್ಯಂತ ಕಷ್ಟವಾಗಿದೆ. ವಿದ್ಯಾರ್ಥಿ ವೇತನವನ್ನೇ ನಂಬಿ ವ್ಯಾಸಂಗ ಮಾಡುತ್ತಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಇದರ ಜೊತೆಗೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ. ರೈತ ವಿದ್ಯಾ ನಿಧಿಯೂ ಕೂಡ ಇಲ್ಲವಾಗಿದೆ. ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ಏಕರೂಪ ವೇಳಾ ಪಟ್ಟಿ ಜಾರಿಗೆ ಮಾಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಎಚ್.ಕೆ.ಪ್ರವೀಣ್, ಪುನೀತ್, ಅಭಿಷೇಕ್, ರೋಹಿತ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಮಗಳೂರು ಗಿರಿಧಾಮಗಳಲ್ಲಿ ಪ್ರವಾಸಿಗರ ಕಾರುಬಾರು
ನಾಲ್ಕೈದು ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ : ಡಿಕೆಶಿ