ಕನ್ನಡಪ್ರಭವಾರ್ತೆ ನಾಗಮಂಗಲ
ತಾಲೂಕಿನ ಬೆಳ್ಳೂರು ಪಟ್ಟಣ ಪಂಚಾಯ್ತಿ ಮುಂಭಾಗದಲ್ಲಿ 31 ಕೋಟಿ ರು.ವೆಚ್ಚದ ಕುಡಿಯುವ ನೀರು ಪೂರೈಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಬೆಳ್ಳೂರು ಹೋಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು.
ಜಿಲ್ಲೆಯ ನಗರಸಭೆ ಸೇರಿದಂತೆ ಎಲ್ಲಾ ತಾಲೂಕು ಕಚೇರಿ, ಪುರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಪಂ ಕಚೇರಿಗಳಲ್ಲಿ ಪುಸ್ತಕ ಇಡಬೇಕು. ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಪ್ರತಿವಾರ ಪುಸ್ತಕವನ್ನು ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆ ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ ತ್ವರಿಗತಿಯಲ್ಲಿ ಜನರ ಸಮಸ್ಯೆ ಪರಿಹರಿಸಬೇಕು ಎಂದರು.ಲಂಚ ಕೊಟ್ಟರೆ ನೀವೇ ಹೊಣೆ:
ಸೂಕ್ತ ದಾಖಲೆ ಕೊಟ್ಟು ಕಾನೂನು ಬದ್ಧವಾಗಿ ಕೆಲಸ ಮಾಡಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ. ನಿಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಅಧಿಕಾರಿಗಳಿಗೆ ಲಂಚ ಕೊಟ್ಟರೆ ನಿಮ್ಮದೇ ಅಪರಾಧ ಹೊರತು ಇದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಚಲುವರಾಯಸ್ವಾಮಿ ಅಥವಾ ಕೃಷ್ಣ ಭೈರೇಗೌಡರನ್ನು ದೂಷಿಸುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಎಚ್ಚರಿಸಿದರು.
ವಿಪಕ್ಷಗಳು ಅಭಿವೃದ್ಧಿ ಸಹಿಸುತ್ತಿಲ್ಲ:
ಕಳೆದ ಐದು ವರ್ಷದಲ್ಲಿ ತಾಲೂಕಿನ ಬೆಳ್ಳೂರು ಕ್ರಾಸ್ನಿಂದ ಹೊಸಮನೆ ಗೇಟ್ವರೆಗಿನ 1 ಕಿ.ಮೀ. ರಸ್ತೆಗೆ ಡಾಂಬರು ಹಾಕಿಸಲು ಆಗಿಲ್ಲ. ಆದಿಚುಂಚನಗಿರಿಯಿಂದ ತಾವರೆಕೆರೆ ಗೇಟ್ ವರೆಗೆ ನಾವು ಮಾಡಿದ್ದ ಕೆಲಸ ಬಿಟ್ಟರೆ ಅಲ್ಲಿಂದ ಹೊಸಮನೆ ಗೇಟ್ವರೆಗೆ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಓವರ್ ಬ್ರಿಡ್ಜ್ ಕಾಮಗಾರಿ ಮಾಡಿಸಲು ಆಗಿರಲಿಲ್ಲ. ಆ ಕಾಮಗಾರಿಗೆ ಈಗ ಮಂಜೂರಾತಿ ಸಿಕ್ಕಿದೆ. ಸದ್ಯದಲ್ಲೇ ಕೆಲಸ ಆರಂಭಿಸಲಾಗುವುದು ಎಂದರು.
ಈ ವೇಳೆ ಬೆಳ್ಳೂರು ಪಪಂ. ಅಧ್ಯಕ್ಷೆ ಲಕ್ಷ್ಮಮ್ಮ, ಉಪಾಧ್ಯಕ್ಷ ಮಹಮ್ಮದ್ ಯಾಸೀನ್, ಸ್ಥಾಯಿ ಸಮಿತಿ ಅಧ್ಯಕ್ಷ ಆಕಾಶ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ, ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಯೋಜನಾ ನಿರ್ದೇಶಕ ಮಾಯಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್, ಮುಖಂಡರಾದ ಶಿವಣ್ಣ, ವೆಂಕಟೇಶ್, ಪಾಪಣ್ಣ, ಲ್ಯಾಬ್ಮಂಜು, ರವಿಕುಮಾರ್ ಸೇರಿದಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.