ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಪಟ್ಟಣದ ಆರಕ್ಷಕ ಠಾಣೆಯಲ್ಲಿ ನಡೆದ ಡಾ.ಅಂಬೇಡ್ಕರ್ 134ನೇ ಜಯಂತಿಯಲ್ಲಿ ಮಾತನಾಡಿ, ಅಂಬೇಡ್ಕರ್ ನಾಡಿನ ಮಹಾಬೆಳಕು. ಇವರ ಭೀಮ ಹೆಜ್ಜೆ ಪ್ರಜಾಪ್ರಭುತ್ವದ ಬಲುದೊಡ್ಡ ಪ್ರಗತಿಯ ಕಿರಣವಾಗಿದೆ ಎಂದರು.
ಶೋಷಿತ ವರ್ಗದಲ್ಲಿ ಹುಟ್ಟಿ ಬಡತನವನ್ನು ಸವಾಲಾಗಿ ಸ್ವೀಕರಿಸಿ ಜಯಶೀಲರಾದ ಧೀಮಂತ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನ ಧಮನಿತರ ಧ್ವನಿಗೆ ಶಕ್ತಿಯಾಗಿದೆ. ಹುಟ್ಟಿನಿಂದ ಸಾಯುವವರಿಗೆ ನೆಮ್ಮದಿಯಿಂದ ಬದುಕಲು ರೂಪಿಸಿದ ಕಾನೂನು ಬ್ರಹ್ಮಾಸ್ತ್ರವಾಗಿದೆ ಎಂದರು.ಮಹಿಳೆಯರು ಮತದಾನ ಮಾಡಲು ಪ್ರಮುಖ ಕಾರಣಕರ್ತರು ಬಾಬಾ ಅವರು. ಶಿಕ್ಷಣ ಮಾನವನ ಸರ್ವಾಂಗೀಣ ವಿಕಸನಕ್ಕೆ ದಾರಿ ಎಂದು ಸಾರಿದ್ದರು. ಅಂಬೇಡ್ಕರ್ ಅವರ ತತ್ವ ಸಿದ್ಧಾಂತ, ಆದರ್ಶ, ಚಿಂತನೆ, ಸಧೃಢ ಭಾರತ ನಿರ್ಮಾಣಕ್ಕೆ ಬಲುದೊಡ್ಡ ಕೊಡುಗೆಯಾಗಿದೆ ಎಂದರು.
ಗಿಡ ನೆಟ್ಟು ಅಂಬೇಡ್ಕರ್ ಜನ್ಮದಿನಾಚರಣೆ
ಕನ್ನಡಪ್ರಭ ವಾರ್ತೆ ಮಂಡ್ಯಬಿಜೆಪಿ ನಗರ ಘಟಕದ ವತಿಯಿಂದ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ಹಾಗೂ ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ತಮಿಳುಕಾಲೋನಿಯಲ್ಲಿರುವ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿ, ಗಿಡ ನೆಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿದ್ದರಾಮಯ್ಯ, ನಗರ ಘಟಕದ ಅಧ್ಯಕ್ಷ ವಸಂತಕುಮಾರ್, ಪ್ರಧಾನಕಾರ್ಯದರ್ಶಿ ಪಪ್ರಸನ್ನ, ಸುನೀಲ್ಕುಮಾರ್, ಶಿವು, ಜಗನ್ನಾಥ್, ಸಂಜಯ್ ಇತರರಿದ್ದರು.