ಗಂಜಿಗುಂಟೆ ಹರಿಜನ ಕುಟುಂಬಗಳ ನಿವೇಶನಕ್ಕೆ ಅರ್ಜಿಗಳ ಸ್ವೀಕಾರ

KannadaprabhaNewsNetwork |  
Published : Aug 14, 2024, 12:58 AM IST

ಸಾರಾಂಶ

ತಾಲೂಕಿನ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಜಿಗುಂಟೆ ಗ್ರಾಮದ ಸರ್ವೆ ನಂ. 105ರಲ್ಲಿ 5 ಎಕರೆ ಸರ್ಕಾರಿ ಗೋಮಾಳವಿದ್ದು, ಪ್ರಸ್ತುತ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಹೆಸರಿನಲ್ಲಿ ಖಾತೆ ಇದೆ. ಅರ್ಹ ಬಡವರಿಗೆ ನಿವೇಶನ ನೀಡುವ ಕುರಿತು ತಾಲೂಕು ಕಚೇರಿ ಮುಂದೆ ಗ್ರಾಮದ ಹರಿಜನ ಕುಟುಂಬಗಳು ಪ್ರತಿಭಟನೆ ನಡೆಸಿದ್ದರು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಪರ ಜಿಲ್ಲಾಧಿಕಾರಿ ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸರ್ವೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ತಾಲೂಕಿನ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಜಿಗುಂಟೆ ಗ್ರಾಮದ ಸರ್ವೆ ನಂ. 105ರಲ್ಲಿ 5 ಎಕರೆ ಸರ್ಕಾರಿ ಗೋಮಾಳವಿದ್ದು, ಪ್ರಸ್ತುತ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಹೆಸರಿನಲ್ಲಿ ಖಾತೆ ಇದೆ. ಅರ್ಹ ಬಡವರಿಗೆ ನಿವೇಶನ ನೀಡುವ ಕುರಿತು ತಾಲೂಕು ಕಚೇರಿ ಮುಂದೆ ಗ್ರಾಮದ ಹರಿಜನ ಕುಟುಂಬಗಳು ಪ್ರತಿಭಟನೆ ನಡೆಸಿದ್ದರು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಪರ ಜಿಲ್ಲಾಧಿಕಾರಿ ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸರ್ವೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ.11ರ ಭಾನುವಾರ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮದ ಸರ್ಕಾರಿ ಗೋಮಾಳದಲ್ಲಿ ಸರ್ಕಾರದ ನಿಯಮಾವಳಿಗಳ ಪ್ರಕಾರ ನಿವೇಶನ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಶಾಸಕರ ಮನವಿ ಮೇರೆಗೆ ಮುಷ್ಕರ ನಿರತ ನಿವೇಶನ ರಹಿತರು ಮುಷ್ಕರ ವಾಪಾಸ್ ಪಡೆದಿದ್ದರು.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಸೋಮಗುದ್ದು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಸೂಚನೆ ನೀಡಿ ನಿವೇಶನ ನೀಡುವ ಕುರಿತು ಅರ್ಜಿ ಆಹ್ವಾನಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋಮಗುದ್ದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ, ಪಿಡಿಒ ಶಿವಣ್ಣ ಆ.12ರಂದೇ ಆದೇಶವನ್ನು ಹೊರಡಿಸಿ ನಿವೇಶನವನ್ನು ಪಡೆಯಲು ಇಚ್ಚಿಸುವವರು ಗ್ರಾಮ ಪಂಚಾಯಿತಿ ಕಚೇರಿ ಸಮಯದಲ್ಲಿ ಲಿಖಿತ ದಾಖಲಾತಿಗಳನ್ನುನೀಡಬೇಕು. ಆ.12ರಿಂದ ಸೆ.30ರ ತನಕ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆರ್ಜಿಗಳನ್ನು ಪಡೆದ ನಂತರ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅರ್ಜಿ ಪರಿಶೀಲನಾ ಗ್ರಾಮ ಸಭೆ ನಡೆಸಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ, ನಿವೇಶನಗಳ ಹಕ್ಕಪತ್ರವನ್ನು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ