ಗಡಿಪಾರು ಆದೇಶ ಸವಾಲಾಗಿ ಸ್ವೀಕಾರ: ಅರುಣ್‌ ಕುಮಾರ್ ಪುತ್ತಿಲ

KannadaprabhaNewsNetwork |  
Published : Jun 04, 2025, 12:47 AM IST
ಅರುಣ್ ಕುಮಾರ್ ಪುತ್ತಿಲ ಖಂಡನಾ ಸಭೆಯಲ್ಲಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ತನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ ಎಂದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪತ್ತಿಲ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಪುತ್ತೂರು

ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ. ಇಂದಿನಿಂದ ರಾತ್ರಿ ಪೊಲೀಸ್ ಇಲಾಖೆ ಯಾವುದೇ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂಬುದನ್ನು ತೋರಿಸಲಿದ್ದೇವೆ ಎಂದು ಅರುಣ್ ಕುಮಾರ್ ಪತ್ತಿಲ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಸಂಜೆ ಮುಕ್ರಂಪಾಡಿ ಸುಭದ್ರ ಸಭಾಭವನದಲ್ಲಿ ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ನುಗ್ಗಿ ದರ್ಪ ತೋರಿಸುತ್ತಿರುವ ಸರ್ವಾಧಿಕಾರಿ ವ್ಯವಸ್ಥೆ ಹಾಗೂ ಗಡಿಪಾರು ಆದೇಶ ವಿರೋಧಿಸಿ ನಡೆದ ಬೃಹತ್ ಖಂಡನಾ ಸಭೆಯಲ್ಲಿ ಮಾತನಾಡಿದರು.ಹಿಂದೂ ಸಮಾಜಕ್ಕೋಸ್ಕರ, ಸಂಘಟನೆಗೋಸ್ಕರ ಕೆಲಸ ಮಾಡುತ್ತಿರುವ ಹಿಂದೂ ಕಾರ್ಯಕರ್ತರ ಮೇಲೆ ಸಿದ್ಧರಾಮಯ್ಯ ಸರ್ಕಾರ ಪೊಲೀಸರ ಮೂಲಕ ಮೇಲೆ ಸವಾರಿ ಮಾಡಿದರೆ ಅದನ್ನು ಯಾವತ್ತೂ ಹಿಂದೂ ಸಮಾಜ ಸಹಿಸುವುದಿಲ್ಲ. ಈ ರೀತಿಯ ಕೆಲಸಗಳಿಗೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ನುಡಿದರು.

ಸರ್ಕಾರದ ಈ ನಡೆಯನ್ನು ಸವಾಲಾಗಿ ಸ್ವೀಕರಿಸಬೇಕಾಗಿದೆ. ಬೇರೆಯವರನ್ನು ಓಲೈಕೆ ಮಾಡಿ ಅಧಿಕಾರಕ್ಕೆ ಬರುವವರು ಬಿಜೆಪಿಯಲ್ಲ. ಮುಂದಿನ ದಿನಗಳಲ್ಲಿ ದ.ಕ.ಜಿಲ್ಲೆಯಲ್ಲಿ ಎಲ್ಲಾ ಕ್ಷೇತ್ರಗಳನ್ನು ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರತಿಯೊಬ್ಬ ಹಿಂದೂ ಶ್ರಮಿಸಬೇಕಾಗಿದೆ ಎಂದರು.ದಿಕ್ಸೂಚಿ ಭಾಷಣ ಮಾಡಿದ ಆರ್‌ಎಸ್‌ಎಸ್‌ನ ಗಣರಾಜ ಭಟ್, ಪುರಾಣಗಳ ಆಶಯದಂತೆ ಹಿಂದೂ ಬದುಕು ನಡೆಸುತ್ತಿದ್ದು, ಇದೀಗ ಸಿದ್ದರಾಮಯ್ಯ ಸರಕಾರ ಹಿಂದೂಗಳನ್ನು ವಿವಿಧ ರೀತಿಯಲ್ಲಿ ದಮನಿಸುವ ಕೆಲಸ ಮಾಡುತ್ತಿರುವುದು ದುರಾದೃಷ್ಟ. ಇಂತಹಾ ತಲೆಕೆಟ್ಟ ಸರಕಾರಕ್ಕೆ ವಿನಾಶ ಕಾಲ ಬಂದಿದೆ ಎಂದರು.

ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಬೂಡಿಯಾರ್ರಾಧಾಕೃಷ್ಣ ರೈ ಮಾತನಾಡಿ, ಹಿಂದೂಗಳು ತಮ್ಮೊಳಗಿನ ವೈಮನಸ್ಸು ಬಿಟ್ಟು ಒಂದಾಗಬೇಕಾದ ಪರಿಸ್ಥಿತಿ ಬಂದಿದೆ ಎಂದರು.ನ್ಯಾಯವಾದಿ ಚಿನ್ಮಯ್ ರೈ, ಪುತ್ತಿಲ ಪರಿವಾರದ ಅಧ್ಯಕ್ಷ ಮಹೇಂದ್ರ ವರ್ಮ, ಗೌರವ ಸಲಹೆಗಾರ ಚಂದಪ್ಪ ಮೂಲ್ಯ, ಖಜಾಂಚಿ ಗಣೇಶ್, ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ಬಿಜೆಪಿ ಪ್ರಮುಖ ಅನಿಲ್ತೆಂಕಿಲ ಉಪಸ್ಥಿತರಿದ್ದರು. ಬಿಜೆಪಿ ಮುಖಂಡ ಉಮೇಶ್ಕೋಡಿಬೈಲು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ.ಜೆ.ವಿಖ್ಯಾತ್, ನವೀನ್‌ ರೈ ಪಂಜಳ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ