ಪುಟ....3ಕ್ಕೆಲಾರಿ-ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ: 20 ಜನರಿಗೆ ಗಂಭೀರ ಗಾಯ

KannadaprabhaNewsNetwork |  
Published : Oct 04, 2025, 01:00 AM IST
ಅಪಘಾತ | Kannada Prabha

ಸಾರಾಂಶ

ದೇವರಹಿಪ್ಪರಗಿ: ಕೆಎಸ್‌ಆರ್‌ಟಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಸುಮಾರು 20 ಜನರು ಗಂಭೀರ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಸಂಭವಿಸಿದೆ.

ದೇವರಹಿಪ್ಪರಗಿ: ಕೆಎಸ್‌ಆರ್‌ಟಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಸುಮಾರು 20 ಜನರು ಗಂಭೀರ ಗಾಯಗೊಂಡಿರುವ ಘಟನೆ

ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಸಂಭವಿಸಿದೆ.

ವಿಜಯಪುರದಿಂದ ಸಿಂದಗಿಗೆ ಹೋಗುವ ಮಾರ್ಗ ಮಧ್ಯ ತುಕಾಲಿ ಡಾಬಾ ಹತ್ತಿರ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಮೆಕ್ಕೆಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ವಿಜಯಪುರ ವಿಭಾಗಕ್ಕೆ ಸೇರಿದ ಸಾರಿಗೆ ಬಸ್‌ ಡಿಕ್ಕಿ ಹೊಡೆದಿದೆ. ಬಸ್‌ ಹಾಗೂ ಲಾರಿ ಎರಡು ವಿಜಯಪುರದಿಂದ ದೇವರಹಿಪ್ಪರಗಿ ಮಾರ್ಗವಾಗಿ ಸಿಂದಗಿ ಕಡೆಗೆ ತೆರಳುತ್ತಿದ್ದವು. ಆದರೆ, ಪಟ್ಟಣದ ಬಳಿ ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋಗಿ ನಿಯಂತ್ರಣ ತಪ್ಪಿ ಬಸ್‌ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆ ನಂತರ ಅದೇ ರಸ್ತೆಯಲ್ಲಿ ಸಿಂದಗಿ ಕಡೆಗೆ ತೆರಳುತ್ತಿದ್ದ ಶಾಸಕ ಅಶೋಕ ಮನಗೂಳಿ ಸ್ಥಳೀಯರ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಿದ್ದು, ಬಳಿಕ ವಾಹನಗಳ ತಡೆದು ಗಾಯಗಾಳುಗಳನ್ನು ವಿಜಯಪುರ, ಸಿಂದಗಿ ಹಾಗೂ ದೇವರಹಿಪ್ಪರಗಿ ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸಿ ಕೊಟ್ಟಿದ್ದಾರೆ.

ಬಳಿಕ, ಸ್ಥಳಕ್ಕೆ ದೇವರಹಿಪ್ಪರಗಿ ಪಿಎಸ್ಐ ಸಚಿನ್ ಆಲಮೇಲಕರ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ