ಆಕಸ್ಮಿಕ ಅಗ್ನಿ ಅವಘಡ: ಕಾರು ಬೆಂಕಿಗಾಹುತಿ

KannadaprabhaNewsNetwork |  
Published : Apr 07, 2024, 01:50 AM IST
ಬೆಂಕಿ ಹೊತ್ತಿಕೊಂಡ ಕಾರು ಹಾಗೂ ಅಗ್ನಿಶಾಮಕ ವಾಹನ ನಿಂತಿರುವುದು | Kannada Prabha

ಸಾರಾಂಶ

ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೊನ್ನುಟಗಿ ಬಳಿ ಸಿಂದಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಕಾರಿನಿಂದ ಇಳಿದು ಹೊರಗೆ ಓಡಿ ಬಂದಿದ್ದಾನೆ. ಹೀಗಾಗಿ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೊನ್ನುಟಗಿ ಬಳಿ ಸಿಂದಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಕಾರಿನಿಂದ ಇಳಿದು ಹೊರಗೆ ಓಡಿ ಬಂದಿದ್ದಾನೆ. ಹೀಗಾಗಿ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ದುರ್ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಬಳಿಕ ಕಾರ್‌ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ. ಕಾರಿನ ವಾರಸುದಾರರು ಸ್ಥಳದಲ್ಲಿ ಇಲ್ಲದ ಕಾರಣ ಪೊಲೀಸರು ಕಾರಿನ ಮಾಲೀಕರ ವಿವರಗಳ ಕುರಿತು ತಪಾಸಣೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌