ಗುಡಿಸಲಿಗೆ ಆಕಸ್ಮಿಕ ಬೆಂಕಿ : ಸಚಿವೆ ಲಕ್ಷ್ಮೀ ಧನ ಸಹಾಯ

KannadaprabhaNewsNetwork |  
Published : May 04, 2024, 12:34 AM IST
ಟಟಟ | Kannada Prabha

ಸಾರಾಂಶ

ಬೆಳಗಾವಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಯಲ್ಲಪ್ಪ ಭೀಮಪ್ಪ ರಾಮಣ್ಣವರ್ ಎಂಬುವರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣ ಭಸ್ಮವಾಗಿದೆ. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹50 ಸಾವಿರ ನೆರವು ನೀಡಿದರು.

ಬೆಳಗಾವಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಯಲ್ಲಪ್ಪ ಭೀಮಪ್ಪ ರಾಮಣ್ಣವರ್ ಎಂಬುವರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣ ಭಸ್ಮವಾಗಿದೆ. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹50 ಸಾವಿರ ನೆರವು ನೀಡಿದರು. ಬಡಾಲ ಅಂಕಲಗಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಕಸ್ಮಿಕ ಬೆಂಕಿ ಅನಾಹುತದಿಂದ ಗುಡಿಸಲು ಸುಟ್ಟು ಕರಕಲಾಗಿದೆ. ಅನಾಹುತದಿಂದಾಗಿ ಶೆಡ್‌ನಲ್ಲಿದ್ದ ಚಿನ್ನ, ಬೆಳ್ಳಿ, ₹2.5 ಲಕ್ಷ ಹಣ, ಮನೆಯಲ್ಲಿನ ದಿನ ಬಳಕೆಯ ವಸ್ತುಗಳು ಸುಟ್ಟು ನಾಶವಾಗಿವೆ. ಯಲ್ಲಪ್ಪ ಭೀಮಪ್ಪ ರಾಮಣ್ಣವರ್ ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಹೀಗಾಗಿ ಇಡೀ ಕುಟುಂಬ ಗುಡಿಸಿಲಿಗೆ ಸ್ಥಳಾಂತರಗೊಂಡಿತ್ತು. ಹಣ, ಒಡವೆ ಎಲ್ಲವೂ ಮನೆಯಲ್ಲಿದ್ದವು. ಈ ವೇಳೆ ಬಡಾಲ ಅಂಕಲಗಿ ಗ್ರಾಮಸ್ಥರು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ