- 65ಕ್ಕೂ ಹೆಚ್ಚು ಮಂದಿಗೆ ಗಾಯ, 13 ಮಂದಿ ಗಂಭೀರ, ಮಂಡ್ಯ, ಮಳವಳ್ಳಿ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆಕನ್ನಡಪ್ರಭ ವಾರ್ತೆ ಹಲಗೂರು
ಅಪಘಾತದಲ್ಲಿ ರೇಖಾ, ಭಾಗ್ಯ, ರೋಹಿಣಿ, ಮಹಾದೇವಮ್ಮ, ಗೀತಾ, ದೀಪು, ಸವಿತಾ, ರತ್ನಮ್ಮ, ನೇತ್ರ, ಸವಿತಾ, ಲಕ್ಷ್ಮಿ, ವೆಂಕಟಮ್ಮ ಸೇರಿದಂತೆ ಒಟ್ಟು 70 ಮಹಿಳೆಯರಿಗೆ ಹೆಚ್ಚು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಗಾಯಾಳುಗಳಲ್ಲಿ ಹೆಚ್ಚಿನವರು ಕೊಳ್ಳೇಗಾಲ, ಯಳಂದೂರು ಮತ್ತು ಹನೂರು ತಾಲೂಕುಗಳ ಗ್ರಾಮಗಳ ಮಹಿಳೆಯರು ಎಂದು ತಿಳಿದು ಬಂದಿದೆ. ಇವರು ಮಳವಳ್ಳಿ ತಾಲೂಕಿನ ಬಾಣಸಮುದ್ರ ಬಳಿಯ ಅಕ್ವೇರಿಯಲ್ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.ಎಂದಿನಂತೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮಳವಳ್ಳಿ ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ಗಳ ಚಾಲಕರ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಶ್ರೀ ಮಹಾಲಕ್ಷ್ಮಿ ಖಾಸಗಿ ಬಸ್ ಮುಂದೆ ಹೋಗುತ್ತಿದ್ದಾಗ ಅಟಾತ್ತಾಗಿ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಸಿ.ಎಚ್.ಟ್ರಾವೆಲ್ಸ್ ಬಸ್ ಮುಂದಿನ ಬಸ್ಸಿಗೆ ಡಿಕ್ಕಿ ಹೊಡೆದಿದೆ. ನಂತರ ಗೂಡ್ಸ್ ವಾಹನವು ಬಸ್ಸಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.
ಶಾಸಕರು ಆಸ್ಪತ್ರೆಗೆ ಭೇಟಿ, ರೋಗಿಗಳ ಆರೋಗ್ಯ ವಿಚಾರಣೆ:
ಹೆಚ್ಚು ಗಾಯಗೊಂಡವರು ಮೈಸೂರು ಜಿಲ್ಲೆಯ ಟಿ.ನರಸೀಪುರ ಅಕ್ಕಪಕ್ಕದ ಗ್ರಾಮದ ಮಹಿಳೆಯರೇ ಆಗಿದ್ದಾರೆ. ದಿನನಿತ್ಯ ಕೂಲಿಗಾಗಿ ದುಡಿಯುತ್ತಿದ್ದ ಇವರಿಗೆ ಅಪಘಾತ ಸಂಭವಿಸಿರುವುದು ವಿಷಾಧನೀಯ. ದೇವರು ಅವರಿಗೆ ಆರೋಗ್ಯ ಭಾಗ್ಯ ನೀಡಲಿ ಎಂದ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಇದೇ ವೇಳೆ ಶಾಸಕರು ತಿಳಿಸಿದರು.
ವಿಷಯ ತಿಳಿದು ಹಲಗೂರು ಪೊಲೀಸ್ ಠಾಣೆ ಪಿಎಸ್ಐ ಲೋಕೇಶ್ ಭೇಟಿ ನೀಡಿ ಗಾಯಾಳುಗಳನ್ನು ಮಳವಳ್ಳಿ ಮತ್ತು ಮಂಡ್ಯ ಆಸ್ಪತ್ರೆಗೆ ಅಂಬ್ಯುಲೆನ್ಸ್ ಹಾಗೂ ಖಾಸಗಿ ವಾಹನಗಳ ಮೂಲಕ ಆಸ್ಪತ್ರೆಗೆ ಕಳುಹಿಸಲು ನೆರವಾದರು.
---25ಕೆಎಂಎನ್ ಡಿ19,20
ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಡೀಸಿ ಡಾ.ಕುಮಾರ, ಎಸ್ಪಿ ಶೋಭರಾಣಿ ಮಹಿಳಾ ಗಾಯಾಳುಗಳ ಆರೋಗ್ಯ ವಿಚಾರಿಸಿದರು.