ಪಾಂಗಾಳ ಕೊಲೆ ಆರೋಪಿ ನ್ಯಾಯಾಲಯಕ್ಕೆ ಶರಣು: ಅಭಯ ನೀಡಿದ್ದ ಮನೆದೈವದ ನುಡಿ ಸತ್ಯವಾಯಿತು!

KannadaprabhaNewsNetwork |  
Published : May 30, 2024, 12:58 AM IST
ಕ್ರೈಂ | Kannada Prabha

ಸಾರಾಂಶ

ಕೊಲೆಗೀಡಾದ ಶರತ್ ಶೆಟ್ಟಿ ಮನೆಯವರು ಮನೆಯ ವರ್ತೆ ಪಂಜುರ್ಲಿ ದೈವದ ಮೊರೆ ಹೋಗಿ, ಕೋಲ ಹರಕೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ದೈವವು ಆರೋಪಿಯು ಎಲ್ಲಿದ್ದರೂ ಪೊಲೀಸರ ಮುಂದೆ ಬರುವಂತೆ ಮಾಡುತ್ತೇನೆ ಎಂದು ಅಭಯ ನೀಡಿತ್ತು.

ಕನ್ನಡಪ್ರಭ ವಾರ್ತೆ ಉಡುಪಿ

ಸುಮಾರು ಒಂದೂವರೆ ವರ್ಷ ಹಿಂದೆ ನಡೆದ ಕೊಲೆಯ ಆರೋಪಿ ಇದೀಗ ನ್ಯಾಯಾಲಯಕ್ಕೆ ಶರಣಾಗಿದ್ದು, ಅಂದು ಮನೆಯ ದೈವವು ನೀಡಿದ ಭರವಸೆ ಸತ್ಯವಾದ ಬಗ್ಗೆ ಚರ್ಚೆಗಳು ಆರಂಭವಾಗಿದೆ.

ಕಳೆದ ವರ್ಷ ಫೆ.5ರಂದು ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿ ಕಾಪು ತಾಲೂಕಿನ ಪಾಂಗಳದ ಮುಂಡೇಡಿ ಶರತ್ ಶೆಟ್ಟಿ ಎಂಬವರ ಕೊಲೆ ನಡೆದಿತ್ತು. ಇದಾಗಿ ವರ್ಷ ಕಳೆದರೂ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ಆಚಾರ್ಯ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ.

ಈ ಸಂದರ್ಭ ಶರತ್ ಶೆಟ್ಟಿ ಮನೆಯವರು ಮನೆಯ ವರ್ತೆ ಪಂಜುರ್ಲಿ ದೈವದ ಮೊರೆ ಹೋಗಿ, ಕೋಲ ಹರಕೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ದೈವವು ಆರೋಪಿಯು ಎಲ್ಲಿದ್ದರೂ ಪೊಲೀಸರ ಮುಂದೆ ಬರುವಂತೆ ಮಾಡುತ್ತೇನೆ ಎಂದು ಅಭಯ ನೀಡಿತ್ತು.

ಇದೀಗ ಆರೋಪಿಯು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದು, ಮೇ 31ರ ವರೆಗೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ದೈವದ ನುಡಿಯು ಸತ್ಯವಾಗಿದೆ, ದೈವವೇ ಆರೋಪಿಯನ್ನು ಶರಣಾಗುವಂತೆ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳಾಗುತ್ತಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!