ಕನ್ನಡಪ್ರ ವಾರ್ತೆ ಬೆಳಗಾವಿಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಪ್ಪನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.
ಏನಿದು ಪ್ರಕರಣ?:
ಕಳೆದ ನಾಲ್ಕೈದು ವರ್ಷಗಳ ಹಿಂದೆ ಆರೋಪಿ ಕಂಡೋಬಾ ವೈಯಕ್ತಿಕ ಕಾರಣಕ್ಕಾಗಿ ತನ್ನ ಚಿಕ್ಕಪ್ಪ ಕೇಶವ ಬೋಸಲೆ ಬಳಿ ₹ 60 ಸಾವಿರ ಸಾಲ ಪಡೆದುಕೊಂಡಿದ್ದ. ಕೆಲವು ತಿಂಗಳ ಹಿಂದಷ್ಟೇ ಕಂಡೋಬಾ ತಾನು ಪಡೆದ ಸಾಲವನ್ನು ಮರಳಿ ಚಿಕ್ಕಪ್ಪನಿಗೆ ಕೊಡಲು ಹೋಗಿದ್ದಾನೆ. ಈ ವೇಳೆ ಹತ್ಯೇಗೀಡಾದ ಕೇಶವ ನೀಡಿದ ಸಾಲಕ್ಕೆ ಬಡ್ಡಿ ಸೇರಿದಂತೆ ಒಟ್ಟು ₹2 ಲಕ್ಷವಾಗಿದ್ದು, ಬಡ್ಡಿ ಸಹಿತ ಎಲ್ಲ ಹಣ ಕೊಡುವಂತೆ ತಿಳಿಸಿದ್ದಾನೆ.ಈ ಹಿನ್ನೆಲೆಯಲ್ಲಿ ಕಂಡೋಬಾ ಬಡ್ಡಿ ಸೇರಿ ಹಣ ತೆಗೆದುಕೊಂಡು ಚಿಕ್ಕಪ್ಪನಿಗೆ ಹಿಂದಿರುಗಿಸಲು ಹೋಗಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಅಷ್ಟರಲ್ಲಿ ಕೇಶವ ಬೋಸಲೆ ತಾನು ಸಾಲ ಕೊಡುವ ಸಮಯದಲ್ಲಿ ಹಲವು ಪತ್ರಗಳಿಗೆ ಸಹಿ ಹಾಕಿಸಿಕೊಂಡಿದ್ದನು. ಆ ದಾಖಲೆಗಳ ಮೂಲಕ ಕಂಡೋಬಾಗೆ ಸೇರಿದ್ದ 2.5 ಎಕರೆ ಜಮೀನನ್ನು ಕೇಶವ ತನ್ನ ಹೆಸರಿಗೆ ವರ್ಗಾಯಿಸಿಕೊಂಡಿದ್ದ.
ಈ ಪ್ರಕರಣದ ಬೆನ್ನು ಹತ್ತಿದ ಐಗಳಿ ಪೊಲೀಸರು ಹಂತಕನನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಪೊಲೀಸರ ಕಾರ್ಯಕ್ಕೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.