ಸಾಧನೆಯ ಪ್ರಶಸ್ತಿಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ

KannadaprabhaNewsNetwork |  
Published : Sep 07, 2025, 01:00 AM IST

ಸಾರಾಂಶ

ಸಾಧನೆಯ ಪ್ರಶಸ್ತಿಗಳು ನಮ್ಮ ಜವಾಬ್ದಾರಿಯನ್ನು ಇನ್ನು ಹೆಚ್ಚುಸುತ್ತದೆ ಅದನ್ನು ಉಳಿಸಿಕೊಳ್ಳುವ ಕರ್ತವ್ಯ ನಮ್ಮದು ಎಂದು ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಕೊರಟಗೆರೆ ಸಿಪಿಐ ಆರ್.ಪಿ.ಅನಿಲ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಸಾಧನೆಯ ಪ್ರಶಸ್ತಿಗಳು ನಮ್ಮ ಜವಾಬ್ದಾರಿಯನ್ನು ಇನ್ನು ಹೆಚ್ಚುಸುತ್ತದೆ ಅದನ್ನು ಉಳಿಸಿಕೊಳ್ಳುವ ಕರ್ತವ್ಯ ನಮ್ಮದು ಎಂದು ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಕೊರಟಗೆರೆ ಸಿಪಿಐ ಆರ್.ಪಿ.ಅನಿಲ್ ತಿಳಿಸಿದರು.

ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದವತಿಯಿಂದ ರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ರಾಷ್ಟ್ರಪ್ರಶಸ್ತಿ ಪದವಿ ಅತ್ಯುತ್ತಮವಾದುದು. ಈ ಪ್ರಶಸ್ತಿ ರಾಜ್ಯದಲ್ಲಿ ಪ್ರತಿ ವರ್ಷ ೩೭ ಮಂದಿಗೆ ಮಾತ್ರ ದೊರೆಯುತ್ತದೆ. ಇಂತಹ ಪ್ರಶಸ್ತಿಗಳಿಂದ ನಮ್ಮ ಮೇಲಿನ ಜವಾಬ್ದಾರಿ ಹೆಚ್ಚಾಗುತ್ತದೆ.ಕೊರಟಗೆರೆ ತಾಲೂಕಿನಲ್ಲಿ ಪೊಲೀಸ್ ಮತ್ತು ಪತ್ರಕರ್ತರ ಸಂಘ ಉತ್ತಮವಾಗಿ ಸ್ನೇಹಮಯವಾಗಿ ಕೆಲಸ ಮಾಡುತ್ತಿದೆ. ಎಷ್ಟೋ ಅಪಘಾತ ಕೊಲೆ ಪ್ರಕರಣಗಳಲ್ಲಿ ಪತ್ರಕರ್ತರು ಸಹಕಾರದಿಂದ ಪ್ರಕರಣಗಳು ಪತ್ತೆಯಾಗಲು ಸಹಕಾರಿಯಾಗಿದೆ. ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ತವರು ಕ್ಷೇತ್ರದಲ್ಲಿ ಅವರ ಸಮ್ಮುಖದಲ್ಲಿ ಇಂತಹ ಪ್ರಶಸ್ತಿಯನ್ನು ಪಡೆಯುತ್ತಿರುವುದು ಹೆಮ್ಮೆ ಎನ್ನಿಸಿದೆ. ನನ್ನನ್ನು ಸನ್ಮಾನಿಸಿದ ತಾಲೂಕು ಕರ್ನಾಟಕ ಕಾರ್ಯನಿತರ ಪತ್ರಕರ್ತರ ಸಂಘಕ್ಕೆ ಧನ್ಯವಾದಗಳನ್ನು ತಿಳಿಸಿದರು.

ತಹಶೀಲ್ದಾರ್ ಮಂಜುನಾಥ್ ಮಾತನಾಡಿ ಸಿಪಿಐ ಅನಿಲ್ ರವರ ಕಾರ್ಯದಕ್ಷತೆಯನ್ನು ನಾನು ೯ ವರ್ಷಗಳ ಹಿಂದೆ ಬೆಂಗಳೂರಿನ ಶ್ರೀರಾಮಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೋಡಿದ್ದೇನೆ. ಅನೇಕ ಠಾಣಾ ವ್ಯಾಪ್ತಿಗೆ ಬರದ ಪ್ರಕರಣಗಳನ್ನು ಸಹ ಪತ್ತೆಹಚ್ಚಿ ಇತ್ಯಾರ್ಥಗೊಳಿಸಿದ್ದಾರೆ. ಇತ್ತೀಚೆಗೆ ದೆಹಲಿ ಮಾದರಿಯಲ್ಲಿ ಅತ್ತೆಯನ್ನು ತುಂಡರಿಸಿ ತಾಲೂಕಿನ ಮೂಲೆ ಮೂಲೆಗೆ ಎಸೆದಿದ್ದ ವೈದ್ಯ ಅಳಿಯನ ಪ್ರಕರಣವನ್ನು ಅವರ ತಂಡದೊಂದಿಗೆ ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ಬಂಧಿಸಿದರು ಎಂದರು. ಸಂಘದ ಅಧ್ಯಕ್ಷ ಕೆ.ವಿ.ಪುರಷೋತ್ತಮ್ ಮಾತನಾಡಿ, ನಮ್ಮಗಳ ಹಲವು ವರ್ಷಗಳ ಪತ್ರಿಕಾ ಜೀವನದ ಬದುಕಿನಲ್ಲಿ ರಾಷ್ಟ್ರಪ್ರಶಸ್ತಿ ಪಡೆದ ಪೊಲೀಸ್ ಇಲಾಖೆಯ ಅಧಿಕಾರಿಯನ್ನು ಗೌರವಿಸುತ್ತಿರುವುದು ಸಂತಸ ತಂದಿದೆ. ಎಂದರು.

ಕೊರಟಗೆರೆ ಪಿಎಸೈ ತೀರ್ಥೇಶ್ ಮಾತನಾಡಿ. ಅನಿಲ್‌ಸಾರ್ ರವರ ಕಾರ್ಯದಕ್ಷತೆ ನಮಗೆಲ್ಲಾ ಮಾರ್ಗದರ್ಶನವಾಗಿದೆ. ಸಣ್ಣ ಕೆಲಸವಾಗಲಿ ಅಥವಾ ದೊಡ್ಡ ಕೆಲಸವಾಗಲಿ ಅದನ್ನು ನಿಷ್ಠೆಯಿಂದ ಎಲ್ಲರ ಜೊತೆಗೂಡಿ ಮಾಡಿ ಮುಗಿಸುತ್ತಾರೆ. ಇಂತಹವರ ಜೊತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ನನ್ನ ಸೌಭಾಗ್ಯವಾಗಿದ್ದು ಅವರಿಂದ ಕಲಿತು ಕೊಳ್ಳುವುದು ಹಾಗೂ ತಿಳಿದುಕೊಳ್ಳುವುದು ಸಾಕಷ್ಠು ಇದೆ ಎಂದರು.

. ಕಾರ್ಯಕ್ರಮದಲ್ಲಿ ಗೃಹ ಸಚಿವರ ಆಪ್ತಸಹಾಕ ಅರವಿಂದ್. ಆರ್.ಐ.ಬಸವರಾಜು. ಜಿಲ್ಲಾ ಸಂಘದ ಕಾರ್ಯದರ್ಶಿ ರಂಗಧಾಮಯ್ಯ. ನಿರ್ದೇಶಕ ಎನ್.ಮೂರ್ತಿ. ತಾಲೂಕು ಸಂಘದ ಉಪಾಧ್ಯಕ್ಷ ಹೆಚ್.ಎನ್.ನಾಗರಾಜು. ಪ್ರಧಾನ ಕಾರ್ಯದರ್ಶಿ ಎ.ಆರ್.ಚಿದಂಬರ. ಖಜಾಂಚಿ ಕೆ.ಬಿ.ಲೋಕೇಶ್. ನಿದೇಶಕರುಗಳಾದ ಎನ್.ಪದ್ಮನಾಭ್. ಸೊಗಡುಶ್ರೀನಿವಾಸ್. ಜಿ.ಎಂ.ಶಿವಾನಂದ. ಡಿ.ಎಂ.ರಾಘವೇಂದ್ರ. ಮಂಜುನಾಥ್. ಕೆ.ಎನ್.ಸತೀಶ್. ಬಿ.ಹೆಚ್.ಹರೀಶ್. ನವೀನ್‌ಕುಮಾರ್. ಕೆ.ಎಲ್.ಲಕ್ಷ್ಮೀಶ್. ನರಸಿಂಹಮೂರ್ತಿ. ಲಕ್ಷ್ಮೀಕಾಂತ. ದೇವರಾಜು. ವಿಜಯ್‌ಶಂಕರ್. ಸತೀಶ್. ಮುತ್ತುರಾಜ್. ರಾಜು. ಬಾಬುನಾಯ್ಕ. ಮುಖಂಡ ವೀರಣ್ಣಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

PREV

Recommended Stories

ಭಕ್ತರ ಸಹಕಾರದಿಂದ ದೇವಸ್ಥಾನದಲ್ಲಿ ಹೊಸತನ
ಪತ್ನಿ ಮೇಲೆ ಹಲ್ಲೆಗೈದು ಅರ್ಧ ತಲೆ ಬೋಳಿಸಿದ ಪತಿ