ದೌರ್ಬಲ್ಯ ಮೆಟ್ಟಿ ನಿಂತರೆ ಸಾಧನೆ ಸಾಧ್ಯ

KannadaprabhaNewsNetwork |  
Published : Apr 04, 2026, 02:30 AM IST
ಕುಷ್ಟಗಿ ಪಟ್ಟಣದ ತಾಪಂ ಆವರಣದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ ಅವರು ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನವನ್ನು ವಿತರಿಸಿದರು. | Kannada Prabha

ಸಾರಾಂಶ

ಅಂಗವಿಕಲರಿಗೆ ಅನುಕಂಪ ತೋರುವುದಕ್ಕಿಂತ ಅವಕಾಶ ಒದಗಿಸಬೇಕಿದ್ದು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಅಂಗವಿಕಲ ಫಲಾನುಭವಿಗಳಿಗೆ ಉಚಿತ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಿಸಲಾಗುತ್ತಿದೆ

ಕುಷ್ಟಗಿ: ದೌರ್ಬಲ್ಯ ಇರುವುದು ದೇಹಕ್ಕೆ, ಮನಸ್ಸಿಗಲ್ಲ. ನಮ್ಮಲ್ಲಿನ ದೌರ್ಬಲ್ಯವನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಸಾಧ್ಯವಾಗಲಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಪಟ್ಟಣದ ತಾಪಂ ಆವರಣದಲ್ಲಿ 2024-25ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ತಾಪಂ ಅನಿರ್ಬಂಧಿತ ಅನುದಾನದಡಿಯಲ್ಲಿ ಮಂಜೂರಾದ ಉಚಿತ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಾಮಾನ್ಯ ವ್ಯಕ್ತಿಗಳಿಂತ ವಿಶೇಷಚೇತನರು ಒಂದು ಹೆಜ್ಜೆ ಮುಂದೆ ಬರಬೇಕು ಎಂದು ಹೇಳಿದರು.

ಅಂಗವಿಕಲರಿಗೆ ಅನುಕಂಪ ತೋರುವುದಕ್ಕಿಂತ ಅವಕಾಶ ಒದಗಿಸಬೇಕಿದ್ದು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಅಂಗವಿಕಲ ಫಲಾನುಭವಿಗಳಿಗೆ ಉಚಿತ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಿಸಲಾಗುತ್ತಿದೆ ಎಂದರು.

ಅಂಗವಿಕಲರು ಸಮಾಜದ ಮುಖ್ಯವಾಹಿನಿಯಲ್ಲಿ ಮುನ್ನಡೆಯಲು ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದ ಅವರು ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಅರ್ಹರಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ತಾಪಂ ಅಧಿಕಾರಿಗಳು, ಎಂಆರ್‌ಡಬ್ಲ್ಯೂ ಅಧಿಕಾರಿಗಳು, ಪಟ್ಟಣದ ಮುಖಂಡರು, ಗಣ್ಯರು, ಇದ್ದರು.

ಎಂಟು ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: ಮಂಗಳೂರು ಘಟಕದ ಅಷ್ಟಮ ಸಂಭ್ರಮ