ಕನ್ನಡಪ್ರಭ ವಾರ್ತೆ ಮಂಗಳೂರು
ಅವರು ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕೂಟಕ್ಕಳ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಾ.ರವೀಶ್ ತುಂಗಾ ಅವರನ್ನು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಜೀವಮಾನದ ಸಾಧನೆಗಾಗಿ ಕಾರ್ಯಕ್ರಮದಲ್ಲಿ ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ಇಲ್ಲಿನ ಉಪನ್ಯಾಸಕರ ಮತ್ತು ಪ್ರೊಫೆಸರ್ಗಳ ಪರಿಶ್ರಮ ಅಪಾರವಿದೆ. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ೮೩೩ ಮಂದಿ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಅರ್ಹತೆಯನ್ನು ಪಡೆದಿರುವುದು ದೊಡ್ಡ ದಾಖಲೆಯಾಗಿದೆ ಎಂದರು.ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್.ನಾಯಕ್ ಮಾತನಾಡಿ, ಶಿಕ್ಷಕರಾಗುವುದು ಸುಲಭವಾದ ಕೆಲಸವಲ್ಲ, ಒಂದೂವರೆ ತಾಸು ತರಗತಿಯನ್ನು ನಡೆಸಲು ಮೂರು ತಾಸುಗಳಷ್ಟು ಪೂರ್ವ ತಯಾರಿಯನ್ನು ನಡೆಸುತ್ತಾರೆ. ವಿದ್ಯಾರ್ಥಿಗಳು ಸೇರಿದಂತೆ ಸಮಾಜ ಶಿಕ್ಷಕರನ್ನು ಗೌರವಿಸಬೇಕು ಎಂದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ-ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್.ನಾಯಕ್, ವಾಸ್ತುಶಿಲ್ಪ ತಜ್ಞೆ ದೀಪಿಕಾ ಎ.ನಾಯಕ್, ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್, ಶೈಕ್ಷಣಿಕ ಸಮಿತಿಯ ಸದಸ್ಯ ಮತ್ತು ಗಣಿತ ವಿಭಾಗದ ಉಪನ್ಯಾಸಕ ಪ್ರೊ.ವಿನಯ್ ಕುಮಾರ್, ಕೋಚಿಂಗ್ ಸಹಾಯಕ, ಹಿಂದಿ ವಿಭಾಗದ ಉಪನ್ಯಾಸಕ ಪ್ರಮೋದ್ ಕಿಣಿ