ಮಾಗಡಿ: ಪಟ್ಟಣದ ಸರಸ್ವತಿ ವಿದ್ಯಾಮಂದಿರ ಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಸ್ತಿಪಟುಗಳಾದ ಕಿಶನ್.ವಿ.ಎನ್ ಹಾಗೂ ಜೀವನ್ ಗೌಡ 2025ರ ಮಿನಿ ಒಲಂಪಿಕ್ಸ್ ನ ಕುಸ್ತಿ ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕ ಪಡೆದಿದ್ದಾರೆ.
ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ, ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಮಹಾ ಕಾರ್ಯದರ್ಶಿ ಅನಂತರಾಜು ಅವರು ಮಿನಿ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕಿಶನ್ ಹಾಗೂ ಜೀವನ್ ಅವರಿಗೆ ಅಭಿನಂದನೆ ತಿಳಿಸಿದರು.
ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಎಲ್ಲಾ ಶಿಕ್ಷಕರು, ಬಮೂಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್, ಶಾಸಕ ಎಚ್.ಸಿ.ಬಾಲಕೃಷ್ಣ, ಸಂಸದ ಡಾ.ಮಂಜುನಾಥ್, ಮಾಜಿ ಶಾಸಕ ಎ.ಮಂಜುನಾಥ್, ಸಮಾಜ ಸೇವಕರಾದ ಡಾ.ಎಚ್.ಎಂ.ಕೃಷ್ಣಮೂರ್ತಿ, ಎ.ಎಚ್.ಬಸವರಾಜ್, ಸಾಮ್ರಾಟ್ ಗೌಡ ಸೇರಿದಂತೆ ಅನೇಕರು ಶುಭ ಕೋರಿದರು.ಈ ಸಂದರ್ಭದಲ್ಲಿ ಕರ್ನಾಟಕ ಕುಸ್ತಿ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಿವಾಸ್, ತಾಂತ್ರಿಕ ತರಬೇತಿ ಛೇರ್ಮನ್ ವಿನೋದ್, ಕಚೇರಿಯ ಸಿಇಒ ನಾಗೇಶ್ ಮತ್ತಿತರರು ಹಾಜರಿದ್ದರು.
4ಕೆಆರ್ ಎಂಎನ್ 6.ಜೆಪಿಜಿಮಿನಿ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕಿಶನ್ ಹಾಗೂ ಜೀವನ್ ಅವರಿಗೆ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ, ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಮಹಾ ಕಾರ್ಯದರ್ಶಿ ಅನಂತರಾಜು ಅಭಿನಂದನೆ ಸಲ್ಲಿಸಿದರು.