ವಿಶೇಷಚೇತನರ ಸಾಧನೆಗಳನ್ನು ಉತ್ತೇಜಿಸಬೇಕು: ಶಾಸಕ ಎಸ್.ಎನ್. ಚನ್ನಬಸಪ್ಪ

KannadaprabhaNewsNetwork |  
Published : Apr 11, 2026, 01:30 AM IST
ಪೋಟೊ: 10ಎಸ್‌ಎಂಜಿಕೆಪಿ07ಶಿವಮೊಗ್ಗದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ  ‘ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ-2016’ರ ಕುರಿತು ಏರ್ಪಡಿಸಿದ್ದ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು.  | Kannada Prabha

ಸಾರಾಂಶ

ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ, ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ, ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಐಕ್ಯೂಎಸಿ ಮಾರ್ಗದರ್ಶನದಲ್ಲಿ ಸಬಲ ವಿಶೇಷಚೇತನರ ಸಬಲೀಕರಣ ಕೋಶ, ಸಿಬಿಆರ್ ಕಾನೂನು ಕಾಲೇಜು ಮತ್ತು ದಿವ್ಯಾಂಗರ ಸಬಲೀಕರಣಕ್ಕಾಗಿ ಸಮರ್ಪಿತ ಸಕ್ಷಮ್ ಸಂಸ್ಥೆ ಹಾಗೂ ಸಿಸಿಪಿಡಿ ಸಹಯೋಗದಲ್ಲಿ ಶುಕ್ರವಾರ ‘ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ-2016’ರ ಕುರಿತು ಏರ್ಪಡಿಸಿದ್ದ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ 9 ಲಕ್ಷ ವಿಶೇಷಚೇತನರಿದ್ದಾರೆ. ಅವರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ನೀಡುತ್ತಾ ಬಂದಿದೆ. ನಮ್ಮ ಜಿಲ್ಲೆಯಲ್ಲಿ 23200 ವಿಶೇಷಚೇತನರು ಇದ್ದು, ಇವರ ಅಭಿವೃದ್ಧಿ ಮೊದಲು ನಮ್ಮ ಜಿಲ್ಲೆಯಿಂದಲೇ ಶುರುವಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ. ತಮ್ಮ ಅನುದಾನದಲ್ಲಿ ಪ್ರತಿ ವರ್ಷ ವಿಶೇಷಚೇತನರ ಅಭಿವೃದ್ಧಿಗಾಗಿ 10 ಲಕ್ಷ ರು.ನೀಡಲಾಗುವುದು ಎಂದು ಭರವಸೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ಮಾತನಾಡಿ, ವಿಕಲಚೇತನ ವ್ಯಕ್ತಿಗಳ ಕಾನೂನು ಮತ್ತು ಹಕ್ಕುಗಳ ಬಗ್ಗೆ ಅಧ್ಯಯನ ಕೈಗೊಳ್ಳಬೇಕು ಹಾಗೂ ಅವರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಿಕೊಡಬೇಕು. ವಿದ್ಯಾರ್ಥಿಗಳು ನಿರಂತರ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು. ಇತಿಹಾಸದಿಂದ ಶುರುವಾಗಿ ಭವಿಷ್ಯದ ಕಡೆಗೆ ನಮ್ಮನ್ನು ಕೊಂಡೊಯ್ಯುವ ಇಂತಹ ವಿಶೇಷ ಕಾರ್ಯಾಗಾರಗಳು ಇನ್ನೂ ಹೆಚ್ಚೆಚ್ಚು ನಡೆಯಬೇಕು ಎಂದ ಅವರು, ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಸ್‌.ಶಶಿಧರ್, ನವದೆಹಲಿಯ ಸಿಸಿಪಿಡಿ ಆಯುಕ್ತರಾದ ಗೋವಿಂದರಾಜ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸುವರ್ಣ ನಾಯಕ್, ಐಕ್ಯೂಎಸಿ ಸಂಚಾಲಕರ ವಿದ್ಯಾ ಮರಿಯಾ ಜೋಸೆಫ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ.ಸುರೇಶ್ ಅನಗವಾಡಿ, ಸಕ್ಷಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಉಮೇಶ್ ಅಂದಾರೆ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಚ್ಚಮ್ಮ ದೇವಿಯ ವೈಭವದ ಮಹಾರಥೋತ್ಸವ
ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಪಾತ್ರ ಮಹತ್ವದ್ದು